ಮಂಗಳೂರು : ದ.ಕ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 19, 25 ಮತ್ತು 26 ರಂದು ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
ಮಾರ್ಚ್ 19 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಬಂಟ್ವಾಳ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
ಮಾರ್ಚ್ 25 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
ಮಾರ್ಚ್ 26 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯ ವರೆಗೆ ಮೂಡಬಿದ್ರೆ ತಾಲೂಕು ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸುವಂತೆ ಮಂಗಳೂರು ಪೊಲೀಸ್ ನಿರೀಕ್ಷಕರು, ಎಸಿಬಿ, ಶ್ಯಾಮ್ ಸುಂದರ್ ಹೆಚ್.ಎಂ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…