ಮಂಗಳೂರು : ದ.ಕ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 19, 25 ಮತ್ತು 26 ರಂದು ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
ಮಾರ್ಚ್ 19 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಬಂಟ್ವಾಳ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
ಮಾರ್ಚ್ 25 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
ಮಾರ್ಚ್ 26 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯ ವರೆಗೆ ಮೂಡಬಿದ್ರೆ ತಾಲೂಕು ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸುವಂತೆ ಮಂಗಳೂರು ಪೊಲೀಸ್ ನಿರೀಕ್ಷಕರು, ಎಸಿಬಿ, ಶ್ಯಾಮ್ ಸುಂದರ್ ಹೆಚ್.ಎಂ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…