ಮಂಗಳೂರು : ದ.ಕ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 19, 25 ಮತ್ತು 26 ರಂದು ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
ಮಾರ್ಚ್ 19 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಬಂಟ್ವಾಳ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
ಮಾರ್ಚ್ 25 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
ಮಾರ್ಚ್ 26 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯ ವರೆಗೆ ಮೂಡಬಿದ್ರೆ ತಾಲೂಕು ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸುವಂತೆ ಮಂಗಳೂರು ಪೊಲೀಸ್ ನಿರೀಕ್ಷಕರು, ಎಸಿಬಿ, ಶ್ಯಾಮ್ ಸುಂದರ್ ಹೆಚ್.ಎಂ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…