ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಚುರುಕುಗೊಂಡ ಮುಂಗಾರು | ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಜನ ಜೀವನ ಅಸ್ತವ್ಯಸ್ಥ

July 5, 2024
11:15 AM

ರಾಜ್ಯದಾದ್ಯಂತ ಮುಂಗಾರು ಮಳೆ(Mansoon Rain) ಚುರುಕುಗೊಳ್ಳದಿದ್ದರೂ,ಮಡಿಕೇರಿ(Madikeri) ಉತ್ತರ ಕನ್ನಡ(Uttar kannada), ಉಡುಪಿ(Udupi), ಮಂಗಳೂರು (Mangaluru) ಸೇರಿದಂತೆ ಮಲೆನಾಡು, ಕರಾವಳಿ(coastal) ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು (Rain) ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗಂಗಾವಳಿ ನದಿ ನೀರು ಹೆಚ್ಚಳವಾಗಿ ಅಂಕೋಲ ತಾಲೂಕಿನ ಬಿಳೆಹೊಂಗಿ, ಹೊನ್ನೆಬೈಲು, ಮಂಜುಗುಣಿಯಲ್ಲಿ ರಸ್ತೆ ಮತ್ತು ಮನೆಗಳು ಜಲಾವೃತವಾಗಿವೆ. ಹೊನ್ನೆಬೈಲಿನಲ್ಲಿ 20 ಮನೆ ಜಲಾವೃತವಾಗಿದ್ದು, ಬಿಳೆಹೊಂಗಿ, ಹೊನ್ನೆಬೈಲು, ಶಿಂಗನಮಕ್ಕಿ ಮಂಜುಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ.

ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಬಡಾಕೆರೆ ಸಾಲ್ಬುಡ ವ್ಯಾಪ್ತಿಯಲ್ಲಿ ನೆರೆ ಉಂಟಾಗಿದ್ದು, ಜನ ಮನೆಯಿಂದ ಹೊರಬರಲು ಸಿದ್ಧವಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಗ್ರಾಮಕ್ಕೆ ಭೇಟಿ ಕೊಟ್ಟು ಗ್ರಾಮಸ್ಥರ ಮನವೊಲಿಸಲು ಯತ್ನಿಸಿದ್ದಾರೆ. ಈ ವೇಳೆ ಜನರು ಜಾನುವಾರು, ದಿನಸಿ, ಮನೆಯ ವಸ್ತುಗಳನ್ನು ಬಿಟ್ಟು ನಾವು ಬರುವುದಿಲ್ಲ ಎಂದಿದ್ದಾರೆ. ನೀರಿನ ಮಟ್ಟ ಜಾಸ್ತಿಯಾದರೆ ಅಪಾಯದ ಮಟ್ಟ ಮೀರಿದರೆ ಜನರನ್ನ ಸ್ಥಳಾಂತರಿಸುತ್ತೇವೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಭಾಗದಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ಮಾತ್ರ ರಜೆ ನೀಡಿದ್ದು, ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಡಳಿತ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವ ಕೈಯಲ್ಲಿ ಹಿಡಿದುಕೊಂಡು ದೋಣಿಯಲ್ಲಿ ಹೋಗಬೇಕಾಗುತ್ತದೆ. ನೆರೆ ಇದ್ದರೂ ರಜೆ ನೀಡಿಲ್ಲ ಓಡಾಟಕ್ಕೆ ದೋಣಿ ಇಲ್ಲ. ಸೂಕ್ತ ಮೂಲಭೂತ ಸೌಕರ್ಯ ಒದಗಿಸಿ ಎಂದು ಒತ್ತಾಯಿಸಿದ್ದಾರೆ. ಮಂಗಳೂರಿನಲ್ಲಿ ಸಮುದ್ರದ ಅಲೆಯ ಹೊಡೆತಕ್ಕೆ ನಿರ್ಮಾಣ ಹಂತದಲ್ಲಿದ್ದ ನಾಡದೋಣಿ ಮೀನಿಗಾರಿಕಾ ಜೆಟ್ಟಿ ಸಮುದ್ರ ಪಾಲಾಗಿದೆ. ಹೊರವಲಯದ ಕುಳಾಯಿ ಸಮುದ್ರ ತೀರದಲ್ಲಿ 184 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಜೆಟ್ಟಿಯ ಒಂದು ಭಾಗ ಸಮುದ್ರ ಪಾಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಾರೀ ಮಳೆಯಾಗುತ್ತಿದ್ದು, ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಜೋರಾಗಿ ಮಳೆ ಸುರಿಯುತ್ತಿದೆ. ಪ್ರಮುಖವಾಗಿ ಬೆಳ್ತಂಗಡಿ ಹಾಗೂ ಬಂಟ್ವಾಳದಲ್ಲಿ ಜೋರಾದ ಮಳೆಯ ಹಿನ್ನೆಲೆ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಅಲ್ಲದೇ ನದಿ ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ ಈ ಹಿನ್ನೆಲೆ ಕಾವೇರಿ ನದಿ ಹಾಗೂ ಹಾರಂಗಿ ಜಲಾಶಯಕ್ಕೆ ಜೀವಕಳೆ ಬಂದಿದೆ. ಮಡಿಕೇರಿ (Madikeri)  ತಾಲೂಕಿನ ಹಮ್ಮಿಹಾಲ, ಮುಟ್ಲು, ಕಾಲೂರು, ಭಾಗದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ ಹೆಚ್ಚಾಗಿ ನೀರು ಹರಿದು ಬರುತ್ತಿದೆ. ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 2,842 ಅಡಿಗಳಷ್ಟು ನೀರು ಸಂಗ್ರಹವಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror