MIRROR FOCUS

ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಚುರುಕುಗೊಂಡ ಮುಂಗಾರು | ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಜನ ಜೀವನ ಅಸ್ತವ್ಯಸ್ಥ

Share

ರಾಜ್ಯದಾದ್ಯಂತ ಮುಂಗಾರು ಮಳೆ(Mansoon Rain) ಚುರುಕುಗೊಳ್ಳದಿದ್ದರೂ,ಮಡಿಕೇರಿ(Madikeri) ಉತ್ತರ ಕನ್ನಡ(Uttar kannada), ಉಡುಪಿ(Udupi), ಮಂಗಳೂರು (Mangaluru) ಸೇರಿದಂತೆ ಮಲೆನಾಡು, ಕರಾವಳಿ(coastal) ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು (Rain) ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗಂಗಾವಳಿ ನದಿ ನೀರು ಹೆಚ್ಚಳವಾಗಿ ಅಂಕೋಲ ತಾಲೂಕಿನ ಬಿಳೆಹೊಂಗಿ, ಹೊನ್ನೆಬೈಲು, ಮಂಜುಗುಣಿಯಲ್ಲಿ ರಸ್ತೆ ಮತ್ತು ಮನೆಗಳು ಜಲಾವೃತವಾಗಿವೆ. ಹೊನ್ನೆಬೈಲಿನಲ್ಲಿ 20 ಮನೆ ಜಲಾವೃತವಾಗಿದ್ದು, ಬಿಳೆಹೊಂಗಿ, ಹೊನ್ನೆಬೈಲು, ಶಿಂಗನಮಕ್ಕಿ ಮಂಜುಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ.

Advertisement
ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಬಡಾಕೆರೆ ಸಾಲ್ಬುಡ ವ್ಯಾಪ್ತಿಯಲ್ಲಿ ನೆರೆ ಉಂಟಾಗಿದ್ದು, ಜನ ಮನೆಯಿಂದ ಹೊರಬರಲು ಸಿದ್ಧವಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಗ್ರಾಮಕ್ಕೆ ಭೇಟಿ ಕೊಟ್ಟು ಗ್ರಾಮಸ್ಥರ ಮನವೊಲಿಸಲು ಯತ್ನಿಸಿದ್ದಾರೆ. ಈ ವೇಳೆ ಜನರು ಜಾನುವಾರು, ದಿನಸಿ, ಮನೆಯ ವಸ್ತುಗಳನ್ನು ಬಿಟ್ಟು ನಾವು ಬರುವುದಿಲ್ಲ ಎಂದಿದ್ದಾರೆ. ನೀರಿನ ಮಟ್ಟ ಜಾಸ್ತಿಯಾದರೆ ಅಪಾಯದ ಮಟ್ಟ ಮೀರಿದರೆ ಜನರನ್ನ ಸ್ಥಳಾಂತರಿಸುತ್ತೇವೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಭಾಗದಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ಮಾತ್ರ ರಜೆ ನೀಡಿದ್ದು, ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಡಳಿತ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವ ಕೈಯಲ್ಲಿ ಹಿಡಿದುಕೊಂಡು ದೋಣಿಯಲ್ಲಿ ಹೋಗಬೇಕಾಗುತ್ತದೆ. ನೆರೆ ಇದ್ದರೂ ರಜೆ ನೀಡಿಲ್ಲ ಓಡಾಟಕ್ಕೆ ದೋಣಿ ಇಲ್ಲ. ಸೂಕ್ತ ಮೂಲಭೂತ ಸೌಕರ್ಯ ಒದಗಿಸಿ ಎಂದು ಒತ್ತಾಯಿಸಿದ್ದಾರೆ. ಮಂಗಳೂರಿನಲ್ಲಿ ಸಮುದ್ರದ ಅಲೆಯ ಹೊಡೆತಕ್ಕೆ ನಿರ್ಮಾಣ ಹಂತದಲ್ಲಿದ್ದ ನಾಡದೋಣಿ ಮೀನಿಗಾರಿಕಾ ಜೆಟ್ಟಿ ಸಮುದ್ರ ಪಾಲಾಗಿದೆ. ಹೊರವಲಯದ ಕುಳಾಯಿ ಸಮುದ್ರ ತೀರದಲ್ಲಿ 184 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಜೆಟ್ಟಿಯ ಒಂದು ಭಾಗ ಸಮುದ್ರ ಪಾಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಾರೀ ಮಳೆಯಾಗುತ್ತಿದ್ದು, ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಜೋರಾಗಿ ಮಳೆ ಸುರಿಯುತ್ತಿದೆ. ಪ್ರಮುಖವಾಗಿ ಬೆಳ್ತಂಗಡಿ ಹಾಗೂ ಬಂಟ್ವಾಳದಲ್ಲಿ ಜೋರಾದ ಮಳೆಯ ಹಿನ್ನೆಲೆ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಅಲ್ಲದೇ ನದಿ ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ ಈ ಹಿನ್ನೆಲೆ ಕಾವೇರಿ ನದಿ ಹಾಗೂ ಹಾರಂಗಿ ಜಲಾಶಯಕ್ಕೆ ಜೀವಕಳೆ ಬಂದಿದೆ. ಮಡಿಕೇರಿ (Madikeri)  ತಾಲೂಕಿನ ಹಮ್ಮಿಹಾಲ, ಮುಟ್ಲು, ಕಾಲೂರು, ಭಾಗದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ ಹೆಚ್ಚಾಗಿ ನೀರು ಹರಿದು ಬರುತ್ತಿದೆ. ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 2,842 ಅಡಿಗಳಷ್ಟು ನೀರು ಸಂಗ್ರಹವಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

2 hours ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

6 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

7 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

7 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

8 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago