ಐದು ದಿನಗಳ ಕಾಲ ಅಲರ್ಟ್ : ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆ ಶಾಲಾ ಕಾಲೇಜುಗಳಿಗೆ ಮುಂಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಈ ಎಲ್ಲ ಭಾಗಗಳಲ್ಲಿ ಗುಡುಗು ಮಿಂಚು, ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದೆ.
ಕಡಲತೀರದತ್ತ ತೆರಳಬೇಡಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟೆ ಘೋಷಣೆ ಮಾಡಿದ್ದಾರೆ. ಜೊತೆಗೆ ಸಾಂಪ್ರದಾಯಿಕ ಮೀನುಗಾರಿಕೆ ಸ್ಥಗಿತಗೊಂಡಿದ್ದು ಕಡಲತೀರದತ್ತ ತೆರಳದಂತೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.
ಕರಾವಳಿಯಾದ್ಯಂತ ಭಾರಿ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿರಲಿದ್ದು ಕಾಸರಗೋಡು ಸಹಿತ ಕರಾವಳಿಯಾದ್ಯಂತ ನಿರಂತರ ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮುಂದಿನ 2 ದಿನ ಮಳೆ ಮುಂದುವರೆದು ನಂತರ ಮಳೆ ಕಡಿಮೆಯಾಗಬಹುದು.ಜುಲೈ 10 ರಿಂದ 18 ತನಕ ಮಳೆ ಕಡಿಮೆಯಾಗಿ ಆಗಾಗ ಬಿಸಿಲು ಬರಬಹುದು.ಪ್ರತಿದಿನ ಒಂದೆರಡು ಸಾಮಾನ್ಯ ಮಳೆ ಮುಂದುವರೆಯಲಿದೆ.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…