ಐದು ದಿನಗಳ ಕಾಲ ಅಲರ್ಟ್ : ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆ ಶಾಲಾ ಕಾಲೇಜುಗಳಿಗೆ ಮುಂಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಈ ಎಲ್ಲ ಭಾಗಗಳಲ್ಲಿ ಗುಡುಗು ಮಿಂಚು, ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದೆ.
ಕಡಲತೀರದತ್ತ ತೆರಳಬೇಡಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟೆ ಘೋಷಣೆ ಮಾಡಿದ್ದಾರೆ. ಜೊತೆಗೆ ಸಾಂಪ್ರದಾಯಿಕ ಮೀನುಗಾರಿಕೆ ಸ್ಥಗಿತಗೊಂಡಿದ್ದು ಕಡಲತೀರದತ್ತ ತೆರಳದಂತೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.
ಕರಾವಳಿಯಾದ್ಯಂತ ಭಾರಿ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿರಲಿದ್ದು ಕಾಸರಗೋಡು ಸಹಿತ ಕರಾವಳಿಯಾದ್ಯಂತ ನಿರಂತರ ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮುಂದಿನ 2 ದಿನ ಮಳೆ ಮುಂದುವರೆದು ನಂತರ ಮಳೆ ಕಡಿಮೆಯಾಗಬಹುದು.ಜುಲೈ 10 ರಿಂದ 18 ತನಕ ಮಳೆ ಕಡಿಮೆಯಾಗಿ ಆಗಾಗ ಬಿಸಿಲು ಬರಬಹುದು.ಪ್ರತಿದಿನ ಒಂದೆರಡು ಸಾಮಾನ್ಯ ಮಳೆ ಮುಂದುವರೆಯಲಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…