Advertisement
ವೆದರ್ ಮಿರರ್

#WeatherMirror | 05-07-2023 | ಕರಾವಳಿಯಾದ್ಯಂತ  ನಿರಂತರ  ಮಳೆ | ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು | ರೈತರ ಮೊಗದಲ್ಲಿ ಮೂಡಿದ ಮಂದಹಾಸ |

Share

ಮುಂಗಾರು #Mansoon ಮಳೆ ಕಳೆದ ಎರಡು ದಿನಗಳಿಂದ ಚುರುಕುಗೊಂಡಿದೆ. ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಮುಂದಿವರೆದಿದೆ. ಕರ್ನಾಟಕದ ವಿವಿಧೆಡೆ ಉತ್ತಮ ಮಳೆ #Rain ಯಾಗುತ್ತಿದೆ.  ಕರಾವಳಿಯಾದ್ಯಂತ #CoastalKarnataka ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ#Bengaluru ಜಿಟಿಜಿಟಿ ಮಳೆಯಾಗಿದ್ದು, ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಕಾಸರಗೋಡು ಸಹಿತ ಕರಾವಳಿಯಾದ್ಯಂತ  ನಿರಂತರ  ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಎಲರ್ಟ್ ಮುನ್ಸೂಚನೆ ಇದೆ.

ಐದು ದಿನಗಳ ಕಾಲ ಅಲರ್ಟ್ : ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆ ಶಾಲಾ ಕಾಲೇಜುಗಳಿಗೆ ಮುಂಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಈ ಎಲ್ಲ ಭಾಗಗಳಲ್ಲಿ ಗುಡುಗು ಮಿಂಚು, ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದೆ.

ಕಡಲತೀರದತ್ತ ತೆರಳಬೇಡಿ:  ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟೆ ಘೋಷಣೆ ಮಾಡಿದ್ದಾರೆ. ಜೊತೆಗೆ ಸಾಂಪ್ರದಾಯಿಕ ಮೀನುಗಾರಿಕೆ ಸ್ಥಗಿತಗೊಂಡಿದ್ದು ಕಡಲತೀರದತ್ತ ತೆರಳದಂತೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.

ಕರಾವಳಿಯಾದ್ಯಂತ ಭಾರಿ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿರಲಿದ್ದು ಕಾಸರಗೋಡು ಸಹಿತ ಕರಾವಳಿಯಾದ್ಯಂತ  ನಿರಂತರ  ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮುಂದಿನ 2 ದಿನ ಮಳೆ ಮುಂದುವರೆದು ನಂತರ ಮಳೆ ಕಡಿಮೆಯಾಗಬಹುದು.ಜುಲೈ 10 ರಿಂದ 18 ತನಕ ಮಳೆ  ಕಡಿಮೆಯಾಗಿ ಆಗಾಗ ಬಿಸಿಲು ಬರಬಹುದು.ಪ್ರತಿದಿನ ಒಂದೆರಡು ಸಾಮಾನ್ಯ ಮಳೆ ಮುಂದುವರೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

5 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

23 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago