ಐದು ದಿನಗಳ ಕಾಲ ಅಲರ್ಟ್ : ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆ ಶಾಲಾ ಕಾಲೇಜುಗಳಿಗೆ ಮುಂಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಈ ಎಲ್ಲ ಭಾಗಗಳಲ್ಲಿ ಗುಡುಗು ಮಿಂಚು, ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದೆ.
ಕಡಲತೀರದತ್ತ ತೆರಳಬೇಡಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟೆ ಘೋಷಣೆ ಮಾಡಿದ್ದಾರೆ. ಜೊತೆಗೆ ಸಾಂಪ್ರದಾಯಿಕ ಮೀನುಗಾರಿಕೆ ಸ್ಥಗಿತಗೊಂಡಿದ್ದು ಕಡಲತೀರದತ್ತ ತೆರಳದಂತೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.
ಕರಾವಳಿಯಾದ್ಯಂತ ಭಾರಿ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿರಲಿದ್ದು ಕಾಸರಗೋಡು ಸಹಿತ ಕರಾವಳಿಯಾದ್ಯಂತ ನಿರಂತರ ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮುಂದಿನ 2 ದಿನ ಮಳೆ ಮುಂದುವರೆದು ನಂತರ ಮಳೆ ಕಡಿಮೆಯಾಗಬಹುದು.ಜುಲೈ 10 ರಿಂದ 18 ತನಕ ಮಳೆ ಕಡಿಮೆಯಾಗಿ ಆಗಾಗ ಬಿಸಿಲು ಬರಬಹುದು.ಪ್ರತಿದಿನ ಒಂದೆರಡು ಸಾಮಾನ್ಯ ಮಳೆ ಮುಂದುವರೆಯಲಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…