ಐದು ದಿನಗಳ ಕಾಲ ಅಲರ್ಟ್ : ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆ ಶಾಲಾ ಕಾಲೇಜುಗಳಿಗೆ ಮುಂಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಈ ಎಲ್ಲ ಭಾಗಗಳಲ್ಲಿ ಗುಡುಗು ಮಿಂಚು, ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದೆ.
ಕಡಲತೀರದತ್ತ ತೆರಳಬೇಡಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟೆ ಘೋಷಣೆ ಮಾಡಿದ್ದಾರೆ. ಜೊತೆಗೆ ಸಾಂಪ್ರದಾಯಿಕ ಮೀನುಗಾರಿಕೆ ಸ್ಥಗಿತಗೊಂಡಿದ್ದು ಕಡಲತೀರದತ್ತ ತೆರಳದಂತೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.
ಕರಾವಳಿಯಾದ್ಯಂತ ಭಾರಿ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿರಲಿದ್ದು ಕಾಸರಗೋಡು ಸಹಿತ ಕರಾವಳಿಯಾದ್ಯಂತ ನಿರಂತರ ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮುಂದಿನ 2 ದಿನ ಮಳೆ ಮುಂದುವರೆದು ನಂತರ ಮಳೆ ಕಡಿಮೆಯಾಗಬಹುದು.ಜುಲೈ 10 ರಿಂದ 18 ತನಕ ಮಳೆ ಕಡಿಮೆಯಾಗಿ ಆಗಾಗ ಬಿಸಿಲು ಬರಬಹುದು.ಪ್ರತಿದಿನ ಒಂದೆರಡು ಸಾಮಾನ್ಯ ಮಳೆ ಮುಂದುವರೆಯಲಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…