ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದೆ. ಮಲೆನಾಡು, ಕರಾವಳಿ(Coastal) ಸೇರದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ(Rain). ಮುಂಗಾರು (Monsoon) ಚುರುಕುಗೊಳ್ಳುತ್ತಲೇ ಮುಂಜಾಗ್ರತಾ ಕ್ರಮವಾಗಿ ಉಡುಪಿ(Udupi) ಜಿಲ್ಲೆಯ ಪ್ರಮುಖ ಬೀಚ್ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಲ್ಪೆ (Malpe Beach) ಹಾಗೂ ಲೈಟ್ಹೌಸ್ (Light House) ಹೊಂದಿರುವ ಕಾಪು (Kaup Beach) ಬೀಚ್ಗಳಿಗೆ ತೆರಳದಂತೆ ಪ್ರವೇಶ ನಿಷೇಧಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.
ಸಮುದ್ರವೂ ಪ್ರಕ್ಷುಬ್ಧಗೊಳ್ಳುತ್ತಿದ್ದು ಮುಂದೆ ಮಳೆ ತೀವ್ರಗೊಳ್ಳುತ್ತಲೇ ಇನ್ನಷ್ಟು ಅಬ್ಬರ ಹೆಚ್ಚಲಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ. ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಿದೆ.
ಕಾಪು ಸಮುದ್ರ ತೀರದ ದೀಪಸ್ತಂಭದ ಬಳಿ ಸುಮಾರು 500 ಮೀಟರ್ ಉದ್ದಕ್ಕೆ ಕಂಬಗಳನ್ನು ನೆಟ್ಟು ಹಗ್ಗಗಳನ್ನು ಕಟ್ಟಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಈ ಬೀಚ್ಗಳಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಬೀಚ್ನಲ್ಲಿ ಗಸ್ತು ತಿರುಗುವ ಜೀವ ರಕ್ಷಕರು ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಿದ್ಧಾರೆ. ಮಲ್ಪೆ ಬೀಚ್ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ 7 ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿ ನಿರ್ಮಿಸಲಾಗಿದೆ. ಅದರ ಮೇಲೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ.
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…
ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…
Jaanavi.R , 4th Standard, Udaya English school, Rajeshwari Nagara, Bangalore…
ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…
ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…
ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ…