ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದೆ. ಮಲೆನಾಡು, ಕರಾವಳಿ(Coastal) ಸೇರದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ(Rain). ಮುಂಗಾರು (Monsoon) ಚುರುಕುಗೊಳ್ಳುತ್ತಲೇ ಮುಂಜಾಗ್ರತಾ ಕ್ರಮವಾಗಿ ಉಡುಪಿ(Udupi) ಜಿಲ್ಲೆಯ ಪ್ರಮುಖ ಬೀಚ್ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಲ್ಪೆ (Malpe Beach) ಹಾಗೂ ಲೈಟ್ಹೌಸ್ (Light House) ಹೊಂದಿರುವ ಕಾಪು (Kaup Beach) ಬೀಚ್ಗಳಿಗೆ ತೆರಳದಂತೆ ಪ್ರವೇಶ ನಿಷೇಧಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.
ಸಮುದ್ರವೂ ಪ್ರಕ್ಷುಬ್ಧಗೊಳ್ಳುತ್ತಿದ್ದು ಮುಂದೆ ಮಳೆ ತೀವ್ರಗೊಳ್ಳುತ್ತಲೇ ಇನ್ನಷ್ಟು ಅಬ್ಬರ ಹೆಚ್ಚಲಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ. ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಿದೆ.
ಕಾಪು ಸಮುದ್ರ ತೀರದ ದೀಪಸ್ತಂಭದ ಬಳಿ ಸುಮಾರು 500 ಮೀಟರ್ ಉದ್ದಕ್ಕೆ ಕಂಬಗಳನ್ನು ನೆಟ್ಟು ಹಗ್ಗಗಳನ್ನು ಕಟ್ಟಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಈ ಬೀಚ್ಗಳಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಬೀಚ್ನಲ್ಲಿ ಗಸ್ತು ತಿರುಗುವ ಜೀವ ರಕ್ಷಕರು ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಿದ್ಧಾರೆ. ಮಲ್ಪೆ ಬೀಚ್ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ 7 ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿ ನಿರ್ಮಿಸಲಾಗಿದೆ. ಅದರ ಮೇಲೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ.
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500…
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843…
ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ…
ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490