Advertisement
MIRROR FOCUS

ಕರಾವಳಿಯಲ್ಲಿ ಚುರುಕುಗೊಂಡ ಮುಂಗಾರು | ಉಡುಪಿಯ ಈ ಬೀಚ್‌ಗಳಿಗೆ ಪ್ರವೇಶ ನಿರ್ಬಂಧ..!

Share

ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದೆ. ಮಲೆನಾಡು, ಕರಾವಳಿ(Coastal) ಸೇರದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ(Rain). ಮುಂಗಾರು (Monsoon) ಚುರುಕುಗೊಳ್ಳುತ್ತಲೇ ಮುಂಜಾಗ್ರತಾ ಕ್ರಮವಾಗಿ ಉಡುಪಿ(Udupi) ಜಿಲ್ಲೆಯ ಪ್ರಮುಖ ಬೀಚ್‌ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಲ್ಪೆ (Malpe Beach) ಹಾಗೂ ಲೈಟ್‌ಹೌಸ್‌ (Light House) ಹೊಂದಿರುವ ಕಾಪು (Kaup Beach) ಬೀಚ್‌ಗಳಿಗೆ ತೆರಳದಂತೆ ಪ್ರವೇಶ ನಿಷೇಧಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

Advertisement
Advertisement

ಸಮುದ್ರವೂ ಪ್ರಕ್ಷುಬ್ಧಗೊಳ್ಳುತ್ತಿದ್ದು ಮುಂದೆ ಮಳೆ ತೀವ್ರಗೊಳ್ಳುತ್ತಲೇ ಇನ್ನಷ್ಟು ಅಬ್ಬರ ಹೆಚ್ಚಲಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ. ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಿದೆ.

Advertisement

ಕಾಪು ಸಮುದ್ರ ತೀರದ ದೀಪಸ್ತಂಭದ ಬಳಿ ಸುಮಾರು 500 ಮೀಟರ್‌ ಉದ್ದಕ್ಕೆ ಕಂಬಗಳನ್ನು ನೆಟ್ಟು ಹಗ್ಗಗಳನ್ನು ಕಟ್ಟಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಈ ಬೀಚ್‌ಗಳಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಬೀಚ್‌ನಲ್ಲಿ ಗಸ್ತು ತಿರುಗುವ ಜೀವ ರಕ್ಷಕರು ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಿದ್ಧಾರೆ. ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸುಮಾರು ಒಂದು ಕಿಲೋಮೀಟರ್‌ ಉದ್ದಕ್ಕೆ 7 ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿ ನಿರ್ಮಿಸಲಾಗಿದೆ. ಅದರ ಮೇಲೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ | ವಿಶೇಷ ಅನುಬಂಧ ಕಾರ್ಯಕ್ರಮ

ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ…

1 hour ago

ಗ್ರಾಮೀಣ ಶಾಲೆಗಳಿಗೆ “ಸೇವೆ” | ವೈದ್ಯರ ತಂಡದ “ಸಂಕಲ್ಪ” | ಬಾಳಿಲ ಶಾಲೆಗೆ ಕಲಿಕಾ ಸಾಮಾಗ್ರಿಗಳ ಹಸ್ತಾಂತರ |

ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳಿಗೆ ಈ ಮಾದರಿಯ ಕೊಡುಗೆಗಳು ಲಭ್ಯವಾದರೆ ಉತ್ತಮ ಶಿಕ್ಷಣವನ್ನು…

4 hours ago

Karnakata Weather | 23-06-2024 | ಕೆಲವು ಜಿಲ್ಲೆಗಳಿಗೆ ರೆಡ್‌ ಎಲರ್ಟ್…|‌ ಜೂ.28ರ ತನಕ ಮಳೆ ಮುಂದುವರಿಯುವ ಲಕ್ಷಣ |

ಜುಲೈನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ರಾಜ್ಯದ ಈಗಿನ ಈ ಮಳೆಯ ವಾತಾವರಣವು…

10 hours ago

ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?

ಕಳೆದ ಎರಡು ದಿನಗಳಿಂದ ಸದ್ದು ಮಾಡಿದ ಸುದ್ದಿ ಭಾರೀ ಮಳೆ..!. ಮಲೆನಾಡು, ಕರಾವಳಿ…

23 hours ago

ರೈತ ಮಹಿಳೆಯ ಅಮೋಘ ಸಾಧನೆ ಮೆಚ್ಚಿದ ಪ್ರಧಾನಿ : ಕೃಷಿ ಸಖಿ ಸಂವಾದದಲ್ಲಿ ಮೋದಿ ಜೊತೆ ಭಾಗವಹಿಸಿದ ಯಲ್ಲಾಪುರದ ಶ್ರೀಲತಾ ಹೆಗಡೆ

ಕೃಷಿ(Agriculture) ನಮ್ಮ ದೇಶದ ಬೆನ್ನೆಲುಬು. ಆಧುನಿಕತೆ(Modernization) ಬೆಳೆಯುತ್ತಿದೆ. ಆದರೂ ಕೃಷಿಯನ್ನೇ ನಂಬಿ ಬದುಕುವವರು…

1 day ago

ಹವಾಮಾನ ವೈಪರೀತ್ಯ | ಹಜ್​ ಯಾತ್ರೆ ವೇಳೆ ಬಿಸಿಲಿನ ತಾಪದಿಂದ 98 ಭಾರತೀಯರ ಸಾವು | ಯಾತ್ರಿಕರ ಸುರಕ್ಷತೆಗಾಗಿ 365 ವೈದ್ಯರ ನಿಯೋಜನೆ

ಹವಾಮಾನ ವೈಪರಿತ್ಯ(Climate Change) ಇಡೀ ವಿಶ್ವವನ್ನೇ(World) ಹೈರಾಣಾಗಿಸಿದೆ. ವಿಶ್ವದಾದ್ಯಂತ ಪ್ರಕೃತಿಯ ವಿಕೋಪಕ್ಕೆ(Natural calamities)…

1 day ago