Advertisement
MIRROR FOCUS

ಕರಾವಳಿಯಲ್ಲಿ ಚುರುಕುಗೊಂಡ ಮುಂಗಾರು | ಉಡುಪಿಯ ಈ ಬೀಚ್‌ಗಳಿಗೆ ಪ್ರವೇಶ ನಿರ್ಬಂಧ..!

Share

ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದೆ. ಮಲೆನಾಡು, ಕರಾವಳಿ(Coastal) ಸೇರದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ(Rain). ಮುಂಗಾರು (Monsoon) ಚುರುಕುಗೊಳ್ಳುತ್ತಲೇ ಮುಂಜಾಗ್ರತಾ ಕ್ರಮವಾಗಿ ಉಡುಪಿ(Udupi) ಜಿಲ್ಲೆಯ ಪ್ರಮುಖ ಬೀಚ್‌ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಲ್ಪೆ (Malpe Beach) ಹಾಗೂ ಲೈಟ್‌ಹೌಸ್‌ (Light House) ಹೊಂದಿರುವ ಕಾಪು (Kaup Beach) ಬೀಚ್‌ಗಳಿಗೆ ತೆರಳದಂತೆ ಪ್ರವೇಶ ನಿಷೇಧಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

ಸಮುದ್ರವೂ ಪ್ರಕ್ಷುಬ್ಧಗೊಳ್ಳುತ್ತಿದ್ದು ಮುಂದೆ ಮಳೆ ತೀವ್ರಗೊಳ್ಳುತ್ತಲೇ ಇನ್ನಷ್ಟು ಅಬ್ಬರ ಹೆಚ್ಚಲಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ. ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಿದೆ.

ಕಾಪು ಸಮುದ್ರ ತೀರದ ದೀಪಸ್ತಂಭದ ಬಳಿ ಸುಮಾರು 500 ಮೀಟರ್‌ ಉದ್ದಕ್ಕೆ ಕಂಬಗಳನ್ನು ನೆಟ್ಟು ಹಗ್ಗಗಳನ್ನು ಕಟ್ಟಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಈ ಬೀಚ್‌ಗಳಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಬೀಚ್‌ನಲ್ಲಿ ಗಸ್ತು ತಿರುಗುವ ಜೀವ ರಕ್ಷಕರು ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಿದ್ಧಾರೆ. ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸುಮಾರು ಒಂದು ಕಿಲೋಮೀಟರ್‌ ಉದ್ದಕ್ಕೆ 7 ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿ ನಿರ್ಮಿಸಲಾಗಿದೆ. ಅದರ ಮೇಲೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

7 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

9 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

10 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago