ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದೆ. ಮಲೆನಾಡು, ಕರಾವಳಿ(Coastal) ಸೇರದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ(Rain). ಮುಂಗಾರು (Monsoon) ಚುರುಕುಗೊಳ್ಳುತ್ತಲೇ ಮುಂಜಾಗ್ರತಾ ಕ್ರಮವಾಗಿ ಉಡುಪಿ(Udupi) ಜಿಲ್ಲೆಯ ಪ್ರಮುಖ ಬೀಚ್ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಲ್ಪೆ (Malpe Beach) ಹಾಗೂ ಲೈಟ್ಹೌಸ್ (Light House) ಹೊಂದಿರುವ ಕಾಪು (Kaup Beach) ಬೀಚ್ಗಳಿಗೆ ತೆರಳದಂತೆ ಪ್ರವೇಶ ನಿಷೇಧಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.
ಸಮುದ್ರವೂ ಪ್ರಕ್ಷುಬ್ಧಗೊಳ್ಳುತ್ತಿದ್ದು ಮುಂದೆ ಮಳೆ ತೀವ್ರಗೊಳ್ಳುತ್ತಲೇ ಇನ್ನಷ್ಟು ಅಬ್ಬರ ಹೆಚ್ಚಲಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ. ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಿದೆ.
ಕಾಪು ಸಮುದ್ರ ತೀರದ ದೀಪಸ್ತಂಭದ ಬಳಿ ಸುಮಾರು 500 ಮೀಟರ್ ಉದ್ದಕ್ಕೆ ಕಂಬಗಳನ್ನು ನೆಟ್ಟು ಹಗ್ಗಗಳನ್ನು ಕಟ್ಟಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಈ ಬೀಚ್ಗಳಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಬೀಚ್ನಲ್ಲಿ ಗಸ್ತು ತಿರುಗುವ ಜೀವ ರಕ್ಷಕರು ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಿದ್ಧಾರೆ. ಮಲ್ಪೆ ಬೀಚ್ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ 7 ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿ ನಿರ್ಮಿಸಲಾಗಿದೆ. ಅದರ ಮೇಲೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…