ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು ಶಟಲ್ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…