ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು ಶಟಲ್ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…