ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಯುವಕ ಹರಿಹರದ ಚಂದ್ರಶೇಖರ್ ಎಂದು ತಿಳಿದುಬಂದಿದೆ.
ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್ ಸ್ಕಿಡ್ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಬಳಿಕ ತಪಾಸಣೆಯ ವೇಳೆ ಬ್ರೈನ್ ಡೆಡ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಬಡ ಕುಟುಂಬದ ಚಂದ್ರಶೇಖರ್ ಅವರು ಅಡಿಕೆ ಕೊಯ್ಲು, ಔಷಧಿ ಸಿಂಪಡಣೆ ಸೇರಿದಂತೆ ದೈನಂದಿನ ಕೆಲಸಕ್ಕೆ ಹೋಗುತ್ತಿದ್ದರು. ವೃದ್ದ ತಂದೆ ತಾಯಿ ಜೊತೆ ವಾಸಿಸುತ್ತಿದ್ದ ಚಂದ್ರಶೇಖರ್ ಕುಟುಂಬಕ್ಕೆ ಆಧಾರವಾಗಿದ್ದರು.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…