ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮಿದುಳು ನಿಷ್ಕ್ರಿಯ | ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಸ್ಥರು | ಉಳ್ಳಾಲದಲ್ಲಿ ಘಟನೆ |

January 8, 2023
9:55 PM

ಮಂಗಳೂರು ಜಿಲ್ಲೆಯ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಬೈಕ್‌ ಸವಾರ ಗಂಭೀರ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲಾದ ಬಳಿಕ ಮಿದುಳು ನಿಷ್ಕ್ರಿಯಗೊಂಡಿದ್ದು ತಿಳಿದು ಕುಟುಂಬಸ್ಥರು ಅಂಗಾಂಗ ದಾನ ನೀಡಲು ಮುಂದಾಗಿದ್ದಾರೆ.

ಶನಿವಾರ ತಡರಾತ್ರಿ  ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡ ಯುವಕ.  ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದರು. ಹೀಗಾಗಿ  ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror