ಮಂಗಳೂರು ಜಿಲ್ಲೆಯ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲಾದ ಬಳಿಕ ಮಿದುಳು ನಿಷ್ಕ್ರಿಯಗೊಂಡಿದ್ದು ತಿಳಿದು ಕುಟುಂಬಸ್ಥರು ಅಂಗಾಂಗ ದಾನ ನೀಡಲು ಮುಂದಾಗಿದ್ದಾರೆ.
ಶನಿವಾರ ತಡರಾತ್ರಿ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡ ಯುವಕ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದರು. ಹೀಗಾಗಿ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…