MIRROR FOCUS

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಮಳೆ ಇಲ್ಲದೆ ಬೆಳೆ ಬೆಳೆದ ರೈತ(Farmer) ಕಂಗಾಲಾಗಿದ್ದ. ಇರುವ ನೀರಿನ ಮೂಲಗಳನ್ನು ಬಳಸಿ ಕೆಲ ರೈತರು ಬೆಳೆ ಬೆಳೆದಿದ್ದರು. ಈ ಮಧ್ಯೆ  ಬರದ ನಡುವೆಯೂ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಯುವ ರೈತ ಗಿರೀಶ್‌, ಬೀನ್ಸ್‌ (Beans) ಬೆಳೆ ಬೆಳೆದು ಬಂಪರ್‌ ಲಾಭ(Profit) ಮಾಡಿ ಇದೀಗ ಸುದ್ದಿಯಾಗಿದ್ದಾರೆ.

Advertisement
ಹೌದು. ಇತ್ತೀಚೆಗೆ ರಾಜ್ಯ ಕಂಡ ಬಿಸಿಲಿನ ತಾಪಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಷ್ಟೇ ಅಲ್ಲ, ರಾಜ್ಯದಲ್ಲಿ ಎಲ್ಲಿಯೂ ಹುರುಳಿಕಾಯಿ ಬೆಳೆಯಲು ಸಾಧ್ಯವಾಗಿಲ್ಲ. ರಣ ಬಿಸಿಲಿನ ತಾಪಮಾನಕ್ಕೆ ಹುರುಳಿಕಾಯಿ ಬೆಳೆ ಇಳುವರಿ ಬಂದಿಲ್ಲ. ಹಲವು ಕಡೆ ಬಿಸಿಲಿಗೆ ಹೂ ಬಾಡಿ ಉದುರಿ ಹೋಗಿದೆ. ಇದರಿಂದ ಹುರುಳಿಕಾಯಿಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ. ಒಂದು ಕೆ.ಜಿ ಹುರುಳಿ ಬೆಲೆ ಇನ್ನೂರು ರೂಪಾಯಿಗೆ ಮಾರಾಟವಾಗುತ್ತಿದೆ. ಚಿಕ್ಕಬಳ್ಳಾಪುರ ತರಕಾರಿ ಮಾರುಕಟ್ಟೆಯಲ್ಲಿ ಖರೀದಿ ಮಾಡೋಣ ಅಂದ್ರೂ ಸಾಕಾಗುವಷ್ಟು ಬೀನ್ಸ್ ಸಿಗುತ್ತಿಲ್ಲ. ಒಂದೋ ಎರಡು ಮೂಟೆ ಬೀನ್ಸ್ ಬಂದರೆ ಅದಕ್ಕಾಗಿ ವರ್ತಕರ ನಡುವೆ ಭಾರೀ ಪೈಪೋಟಿ ಬೀಳುತ್ತಿದೆ.

ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಗಿರೀಶ್, ಡಿಗ್ರಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗ್ತಾ ಇರಲಿಲ್ಲ. ಇದರಿಂದ ಕಂಪನಿ ಬಿಟ್ಟು ಊರಿಗೆ ಬಂದು ಇದ್ದ 8 ಎಕರೆ ಜಮೀನಿನಲ್ಲಿ ಎರಡು ಎಕರೆಯಲ್ಲಿ ಹುರುಳಿ ಬೀಜ ನಾಟಿ ಮಾಡಿದ್ದರು. ಕರೆಂಟ್ ಸಮಸ್ಯೆ ಇದ್ದರೂ ಜನರೇಟರ್ ಇಟ್ಟು ತೋಟಕ್ಕೆ ನೀರು ಹಾಯಿಸಿ ರಾತ್ರಿ ಹಗಲು ಕಷ್ಟ ಪಟ್ಟು ಬಂಪರ್ ಬೆಳೆ ಬೆಳೆದಿದ್ದಾರೆ.

ಇದೀಗ ತಾನು ಬೆಳೆದ ಬೆಳೆಗೆ ಬಂಗಾರದಂತಹ ಬೆಲೆ ಬಂದಿದ್ದು ಎರಡು ಟನ್ ಹುರಳಿಗೆ ಬರೋಬ್ಬರಿ ಇಪ್ಪತ್ತು ಲಕ್ಷ ಗಳಿಸಿದ್ದಾರೆ.  ಬರದ ನಡುವೆಯೂ ಬೀನ್ಸ್ ಬೆಳೆದ ರೈತನಿಗೆ  ಲಾಭ ಬಂದಿದ್ದು ಶ್ರಮದಾಯಕವಾಗಿ ಮಾಡಿದ ಕೃಷಿಯು ಈಗ ಕೈ ಹಿಡಿದಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

6 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

6 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

6 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

6 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

6 hours ago