ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಮಳೆ ಇಲ್ಲದೆ ಬೆಳೆ ಬೆಳೆದ ರೈತ(Farmer) ಕಂಗಾಲಾಗಿದ್ದ. ಇರುವ ನೀರಿನ ಮೂಲಗಳನ್ನು ಬಳಸಿ ಕೆಲ ರೈತರು ಬೆಳೆ ಬೆಳೆದಿದ್ದರು. ಈ ಮಧ್ಯೆ ಬರದ ನಡುವೆಯೂ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಯುವ ರೈತ ಗಿರೀಶ್, ಬೀನ್ಸ್ (Beans) ಬೆಳೆ ಬೆಳೆದು ಬಂಪರ್ ಲಾಭ(Profit) ಮಾಡಿ ಇದೀಗ ಸುದ್ದಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಗಿರೀಶ್, ಡಿಗ್ರಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗ್ತಾ ಇರಲಿಲ್ಲ. ಇದರಿಂದ ಕಂಪನಿ ಬಿಟ್ಟು ಊರಿಗೆ ಬಂದು ಇದ್ದ 8 ಎಕರೆ ಜಮೀನಿನಲ್ಲಿ ಎರಡು ಎಕರೆಯಲ್ಲಿ ಹುರುಳಿ ಬೀಜ ನಾಟಿ ಮಾಡಿದ್ದರು. ಕರೆಂಟ್ ಸಮಸ್ಯೆ ಇದ್ದರೂ ಜನರೇಟರ್ ಇಟ್ಟು ತೋಟಕ್ಕೆ ನೀರು ಹಾಯಿಸಿ ರಾತ್ರಿ ಹಗಲು ಕಷ್ಟ ಪಟ್ಟು ಬಂಪರ್ ಬೆಳೆ ಬೆಳೆದಿದ್ದಾರೆ.
ಇದೀಗ ತಾನು ಬೆಳೆದ ಬೆಳೆಗೆ ಬಂಗಾರದಂತಹ ಬೆಲೆ ಬಂದಿದ್ದು ಎರಡು ಟನ್ ಹುರಳಿಗೆ ಬರೋಬ್ಬರಿ ಇಪ್ಪತ್ತು ಲಕ್ಷ ಗಳಿಸಿದ್ದಾರೆ. ಬರದ ನಡುವೆಯೂ ಬೀನ್ಸ್ ಬೆಳೆದ ರೈತನಿಗೆ ಲಾಭ ಬಂದಿದ್ದು ಶ್ರಮದಾಯಕವಾಗಿ ಮಾಡಿದ ಕೃಷಿಯು ಈಗ ಕೈ ಹಿಡಿದಿದೆ.
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…