ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಮಳೆ ಇಲ್ಲದೆ ಬೆಳೆ ಬೆಳೆದ ರೈತ(Farmer) ಕಂಗಾಲಾಗಿದ್ದ. ಇರುವ ನೀರಿನ ಮೂಲಗಳನ್ನು ಬಳಸಿ ಕೆಲ ರೈತರು ಬೆಳೆ ಬೆಳೆದಿದ್ದರು. ಈ ಮಧ್ಯೆ ಬರದ ನಡುವೆಯೂ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಯುವ ರೈತ ಗಿರೀಶ್, ಬೀನ್ಸ್ (Beans) ಬೆಳೆ ಬೆಳೆದು ಬಂಪರ್ ಲಾಭ(Profit) ಮಾಡಿ ಇದೀಗ ಸುದ್ದಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಗಿರೀಶ್, ಡಿಗ್ರಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗ್ತಾ ಇರಲಿಲ್ಲ. ಇದರಿಂದ ಕಂಪನಿ ಬಿಟ್ಟು ಊರಿಗೆ ಬಂದು ಇದ್ದ 8 ಎಕರೆ ಜಮೀನಿನಲ್ಲಿ ಎರಡು ಎಕರೆಯಲ್ಲಿ ಹುರುಳಿ ಬೀಜ ನಾಟಿ ಮಾಡಿದ್ದರು. ಕರೆಂಟ್ ಸಮಸ್ಯೆ ಇದ್ದರೂ ಜನರೇಟರ್ ಇಟ್ಟು ತೋಟಕ್ಕೆ ನೀರು ಹಾಯಿಸಿ ರಾತ್ರಿ ಹಗಲು ಕಷ್ಟ ಪಟ್ಟು ಬಂಪರ್ ಬೆಳೆ ಬೆಳೆದಿದ್ದಾರೆ.
ಇದೀಗ ತಾನು ಬೆಳೆದ ಬೆಳೆಗೆ ಬಂಗಾರದಂತಹ ಬೆಲೆ ಬಂದಿದ್ದು ಎರಡು ಟನ್ ಹುರಳಿಗೆ ಬರೋಬ್ಬರಿ ಇಪ್ಪತ್ತು ಲಕ್ಷ ಗಳಿಸಿದ್ದಾರೆ. ಬರದ ನಡುವೆಯೂ ಬೀನ್ಸ್ ಬೆಳೆದ ರೈತನಿಗೆ ಲಾಭ ಬಂದಿದ್ದು ಶ್ರಮದಾಯಕವಾಗಿ ಮಾಡಿದ ಕೃಷಿಯು ಈಗ ಕೈ ಹಿಡಿದಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…