ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಮಳೆ ಇಲ್ಲದೆ ಬೆಳೆ ಬೆಳೆದ ರೈತ(Farmer) ಕಂಗಾಲಾಗಿದ್ದ. ಇರುವ ನೀರಿನ ಮೂಲಗಳನ್ನು ಬಳಸಿ ಕೆಲ ರೈತರು ಬೆಳೆ ಬೆಳೆದಿದ್ದರು. ಈ ಮಧ್ಯೆ ಬರದ ನಡುವೆಯೂ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಯುವ ರೈತ ಗಿರೀಶ್, ಬೀನ್ಸ್ (Beans) ಬೆಳೆ ಬೆಳೆದು ಬಂಪರ್ ಲಾಭ(Profit) ಮಾಡಿ ಇದೀಗ ಸುದ್ದಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಗಿರೀಶ್, ಡಿಗ್ರಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗ್ತಾ ಇರಲಿಲ್ಲ. ಇದರಿಂದ ಕಂಪನಿ ಬಿಟ್ಟು ಊರಿಗೆ ಬಂದು ಇದ್ದ 8 ಎಕರೆ ಜಮೀನಿನಲ್ಲಿ ಎರಡು ಎಕರೆಯಲ್ಲಿ ಹುರುಳಿ ಬೀಜ ನಾಟಿ ಮಾಡಿದ್ದರು. ಕರೆಂಟ್ ಸಮಸ್ಯೆ ಇದ್ದರೂ ಜನರೇಟರ್ ಇಟ್ಟು ತೋಟಕ್ಕೆ ನೀರು ಹಾಯಿಸಿ ರಾತ್ರಿ ಹಗಲು ಕಷ್ಟ ಪಟ್ಟು ಬಂಪರ್ ಬೆಳೆ ಬೆಳೆದಿದ್ದಾರೆ.
ಇದೀಗ ತಾನು ಬೆಳೆದ ಬೆಳೆಗೆ ಬಂಗಾರದಂತಹ ಬೆಲೆ ಬಂದಿದ್ದು ಎರಡು ಟನ್ ಹುರಳಿಗೆ ಬರೋಬ್ಬರಿ ಇಪ್ಪತ್ತು ಲಕ್ಷ ಗಳಿಸಿದ್ದಾರೆ. ಬರದ ನಡುವೆಯೂ ಬೀನ್ಸ್ ಬೆಳೆದ ರೈತನಿಗೆ ಲಾಭ ಬಂದಿದ್ದು ಶ್ರಮದಾಯಕವಾಗಿ ಮಾಡಿದ ಕೃಷಿಯು ಈಗ ಕೈ ಹಿಡಿದಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…