Advertisement
MIRROR FOCUS

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

Share

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಮಳೆ ಇಲ್ಲದೆ ಬೆಳೆ ಬೆಳೆದ ರೈತ(Farmer) ಕಂಗಾಲಾಗಿದ್ದ. ಇರುವ ನೀರಿನ ಮೂಲಗಳನ್ನು ಬಳಸಿ ಕೆಲ ರೈತರು ಬೆಳೆ ಬೆಳೆದಿದ್ದರು. ಈ ಮಧ್ಯೆ  ಬರದ ನಡುವೆಯೂ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಯುವ ರೈತ ಗಿರೀಶ್‌, ಬೀನ್ಸ್‌ (Beans) ಬೆಳೆ ಬೆಳೆದು ಬಂಪರ್‌ ಲಾಭ(Profit) ಮಾಡಿ ಇದೀಗ ಸುದ್ದಿಯಾಗಿದ್ದಾರೆ.

ಹೌದು. ಇತ್ತೀಚೆಗೆ ರಾಜ್ಯ ಕಂಡ ಬಿಸಿಲಿನ ತಾಪಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಷ್ಟೇ ಅಲ್ಲ, ರಾಜ್ಯದಲ್ಲಿ ಎಲ್ಲಿಯೂ ಹುರುಳಿಕಾಯಿ ಬೆಳೆಯಲು ಸಾಧ್ಯವಾಗಿಲ್ಲ. ರಣ ಬಿಸಿಲಿನ ತಾಪಮಾನಕ್ಕೆ ಹುರುಳಿಕಾಯಿ ಬೆಳೆ ಇಳುವರಿ ಬಂದಿಲ್ಲ. ಹಲವು ಕಡೆ ಬಿಸಿಲಿಗೆ ಹೂ ಬಾಡಿ ಉದುರಿ ಹೋಗಿದೆ. ಇದರಿಂದ ಹುರುಳಿಕಾಯಿಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ. ಒಂದು ಕೆ.ಜಿ ಹುರುಳಿ ಬೆಲೆ ಇನ್ನೂರು ರೂಪಾಯಿಗೆ ಮಾರಾಟವಾಗುತ್ತಿದೆ. ಚಿಕ್ಕಬಳ್ಳಾಪುರ ತರಕಾರಿ ಮಾರುಕಟ್ಟೆಯಲ್ಲಿ ಖರೀದಿ ಮಾಡೋಣ ಅಂದ್ರೂ ಸಾಕಾಗುವಷ್ಟು ಬೀನ್ಸ್ ಸಿಗುತ್ತಿಲ್ಲ. ಒಂದೋ ಎರಡು ಮೂಟೆ ಬೀನ್ಸ್ ಬಂದರೆ ಅದಕ್ಕಾಗಿ ವರ್ತಕರ ನಡುವೆ ಭಾರೀ ಪೈಪೋಟಿ ಬೀಳುತ್ತಿದೆ.

ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಗಿರೀಶ್, ಡಿಗ್ರಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗ್ತಾ ಇರಲಿಲ್ಲ. ಇದರಿಂದ ಕಂಪನಿ ಬಿಟ್ಟು ಊರಿಗೆ ಬಂದು ಇದ್ದ 8 ಎಕರೆ ಜಮೀನಿನಲ್ಲಿ ಎರಡು ಎಕರೆಯಲ್ಲಿ ಹುರುಳಿ ಬೀಜ ನಾಟಿ ಮಾಡಿದ್ದರು. ಕರೆಂಟ್ ಸಮಸ್ಯೆ ಇದ್ದರೂ ಜನರೇಟರ್ ಇಟ್ಟು ತೋಟಕ್ಕೆ ನೀರು ಹಾಯಿಸಿ ರಾತ್ರಿ ಹಗಲು ಕಷ್ಟ ಪಟ್ಟು ಬಂಪರ್ ಬೆಳೆ ಬೆಳೆದಿದ್ದಾರೆ.

ಇದೀಗ ತಾನು ಬೆಳೆದ ಬೆಳೆಗೆ ಬಂಗಾರದಂತಹ ಬೆಲೆ ಬಂದಿದ್ದು ಎರಡು ಟನ್ ಹುರಳಿಗೆ ಬರೋಬ್ಬರಿ ಇಪ್ಪತ್ತು ಲಕ್ಷ ಗಳಿಸಿದ್ದಾರೆ.  ಬರದ ನಡುವೆಯೂ ಬೀನ್ಸ್ ಬೆಳೆದ ರೈತನಿಗೆ  ಲಾಭ ಬಂದಿದ್ದು ಶ್ರಮದಾಯಕವಾಗಿ ಮಾಡಿದ ಕೃಷಿಯು ಈಗ ಕೈ ಹಿಡಿದಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

13 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

13 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago