ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಮಳೆ ಇಲ್ಲದೆ ಬೆಳೆ ಬೆಳೆದ ರೈತ(Farmer) ಕಂಗಾಲಾಗಿದ್ದ. ಇರುವ ನೀರಿನ ಮೂಲಗಳನ್ನು ಬಳಸಿ ಕೆಲ ರೈತರು ಬೆಳೆ ಬೆಳೆದಿದ್ದರು. ಈ ಮಧ್ಯೆ ಬರದ ನಡುವೆಯೂ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಯುವ ರೈತ ಗಿರೀಶ್, ಬೀನ್ಸ್ (Beans) ಬೆಳೆ ಬೆಳೆದು ಬಂಪರ್ ಲಾಭ(Profit) ಮಾಡಿ ಇದೀಗ ಸುದ್ದಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಗಿರೀಶ್, ಡಿಗ್ರಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗ್ತಾ ಇರಲಿಲ್ಲ. ಇದರಿಂದ ಕಂಪನಿ ಬಿಟ್ಟು ಊರಿಗೆ ಬಂದು ಇದ್ದ 8 ಎಕರೆ ಜಮೀನಿನಲ್ಲಿ ಎರಡು ಎಕರೆಯಲ್ಲಿ ಹುರುಳಿ ಬೀಜ ನಾಟಿ ಮಾಡಿದ್ದರು. ಕರೆಂಟ್ ಸಮಸ್ಯೆ ಇದ್ದರೂ ಜನರೇಟರ್ ಇಟ್ಟು ತೋಟಕ್ಕೆ ನೀರು ಹಾಯಿಸಿ ರಾತ್ರಿ ಹಗಲು ಕಷ್ಟ ಪಟ್ಟು ಬಂಪರ್ ಬೆಳೆ ಬೆಳೆದಿದ್ದಾರೆ.
ಇದೀಗ ತಾನು ಬೆಳೆದ ಬೆಳೆಗೆ ಬಂಗಾರದಂತಹ ಬೆಲೆ ಬಂದಿದ್ದು ಎರಡು ಟನ್ ಹುರಳಿಗೆ ಬರೋಬ್ಬರಿ ಇಪ್ಪತ್ತು ಲಕ್ಷ ಗಳಿಸಿದ್ದಾರೆ. ಬರದ ನಡುವೆಯೂ ಬೀನ್ಸ್ ಬೆಳೆದ ರೈತನಿಗೆ ಲಾಭ ಬಂದಿದ್ದು ಶ್ರಮದಾಯಕವಾಗಿ ಮಾಡಿದ ಕೃಷಿಯು ಈಗ ಕೈ ಹಿಡಿದಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…