ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಮಳೆ ಇಲ್ಲದೆ ಬೆಳೆ ಬೆಳೆದ ರೈತ(Farmer) ಕಂಗಾಲಾಗಿದ್ದ. ಇರುವ ನೀರಿನ ಮೂಲಗಳನ್ನು ಬಳಸಿ ಕೆಲ ರೈತರು ಬೆಳೆ ಬೆಳೆದಿದ್ದರು. ಈ ಮಧ್ಯೆ ಬರದ ನಡುವೆಯೂ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಯುವ ರೈತ ಗಿರೀಶ್, ಬೀನ್ಸ್ (Beans) ಬೆಳೆ ಬೆಳೆದು ಬಂಪರ್ ಲಾಭ(Profit) ಮಾಡಿ ಇದೀಗ ಸುದ್ದಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಗಿರೀಶ್, ಡಿಗ್ರಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗ್ತಾ ಇರಲಿಲ್ಲ. ಇದರಿಂದ ಕಂಪನಿ ಬಿಟ್ಟು ಊರಿಗೆ ಬಂದು ಇದ್ದ 8 ಎಕರೆ ಜಮೀನಿನಲ್ಲಿ ಎರಡು ಎಕರೆಯಲ್ಲಿ ಹುರುಳಿ ಬೀಜ ನಾಟಿ ಮಾಡಿದ್ದರು. ಕರೆಂಟ್ ಸಮಸ್ಯೆ ಇದ್ದರೂ ಜನರೇಟರ್ ಇಟ್ಟು ತೋಟಕ್ಕೆ ನೀರು ಹಾಯಿಸಿ ರಾತ್ರಿ ಹಗಲು ಕಷ್ಟ ಪಟ್ಟು ಬಂಪರ್ ಬೆಳೆ ಬೆಳೆದಿದ್ದಾರೆ.
ಇದೀಗ ತಾನು ಬೆಳೆದ ಬೆಳೆಗೆ ಬಂಗಾರದಂತಹ ಬೆಲೆ ಬಂದಿದ್ದು ಎರಡು ಟನ್ ಹುರಳಿಗೆ ಬರೋಬ್ಬರಿ ಇಪ್ಪತ್ತು ಲಕ್ಷ ಗಳಿಸಿದ್ದಾರೆ. ಬರದ ನಡುವೆಯೂ ಬೀನ್ಸ್ ಬೆಳೆದ ರೈತನಿಗೆ ಲಾಭ ಬಂದಿದ್ದು ಶ್ರಮದಾಯಕವಾಗಿ ಮಾಡಿದ ಕೃಷಿಯು ಈಗ ಕೈ ಹಿಡಿದಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…