ರಾಜ್ಯ

ಗ್ರಾಮೀಣ ಭಾಗದ ಕೃಷಿಕನ ಸಾಧನೆ | 55 ನೇ ವರ್ಷದಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದ ಗ್ರಾಮೀಣ ಪ್ರದೇಶದ ಸಾಧಕ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದು ಸರ್ವವಿಧಿತ. ವ್ಯಕ್ತಿಯ ಪ್ರತೀ ಕ್ಷಣ, ಪ್ರತೀ ದಿನವೂ ಕಲಿಕೆಯೇ. ಇದಕ್ಕೆ ಸಾಕ್ಷಿಯಾಗಿದ್ದಾರೆ ಗ್ರಾಮೀಣ ಭಾಗದ ಸಾಧಕ. ತನ್ನ 55 ನೇ ವಯಸ್ಸಿನಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದು ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ ಬಳಿಯ ಕಟ್ಟದ ಶಂಕರ ಭಟ್‌ ಕಟ್ಟ ಅವರು ಸಾಧನೆ ಮಾಡಿರುವ ಕೃಷಿಕ.

Advertisement

ಮೈತ್ರೀ ಸಂಸ್ಕೃತಿ ಸಂಸ್ಕೃತ ಪ್ರತಿಷ್ಠಾನ ಗುರುಕುಲ ನಡೆಸಿ ಕೊಡುತ್ತಿರುವ ಅಂತರ್ಜಾಲ ಸಂಸ್ಕೃತ ತರಗತಿಯಲ್ಲಿ, ಡಾ.ಗಣಪತಿ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಸಂಸ್ಕೃತ ತರಗತಿಗಳು ನಡೆಯುತ್ತಿತ್ತು. ಸುಮಾರು 500 ಜನರು ಈ ತರಗತಿಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಎಲ್ಲಾ ವಯಸ್ಸಿನವರೂ ಭಾಗವಹಿಸುತ್ತಿದ್ದರು. ಆನ್‌ಲೈನ್‌ ತರಗತಿಯಲ್ಲಿ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ಕೊಲ್ಲಮೊಗ್ರ ಬಳಿಯ ಕಟ್ಟದ ಕೃಷಿಕ ಶಂಕರ ಭಟ್‌ ಅವರೂ ಭಾಗವಹಿಸಿದ್ದರು. ತಮ್ಮ 55 ನೇ ವಯಸ್ಸಿನಲ್ಲಿ ಆನ್‌ಲೈನ್‌ ಮೂಲಕ ಕುಳಿತು ಅತ್ಯಂತ ಶ್ರದ್ಧೆಯಿಂದ ಸಂಸ್ಕೃತ ಪಾಠದಲ್ಲಿ ಭಾಗವಹಿಸಿ, ಸಂಸ್ಕೃತ ಪ್ರವೇಶ ಪರೀಕ್ಷೆಯಲ್ಲಿ 96/100 ಅಂಕ ಪಡೆದು ಅತಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರ ಈ ಸಾಧನೆ ಎಲ್ಲರ ಗಮನ ಸೆಳೆದಿದೆ.

ಇಲ್ಲಿ ಗ್ರಾಮೀಣ ಭಾಗದ ಅದರಲ್ಲೂ ಕೃಷಿಕ ಕುಟುಂಬದ ಶಂಕರ ಭಟ್‌ ಅವರ ಸಾಧನೆ ಗಮನಾರ್ಹವಾದರೆ, ಆಸಕ್ತಿ ಇದ್ದರೆ ಆನ್‌ ಲೈನ್‌ ಶಿಕ್ಷಣವು ಎಲ್ಲಾ ವಯಸ್ಸಿನವರಿಗೂ ಸಾಧ್ಯವಿದೆ. ಇನ್ನೊಂದು ಅಂಶವೆಂದರೆ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಭಾಗದಲ್ಲಿ ಇಂಟರ್ನೆಟ್‌ ಪಡೆದು, ಅದರಲ್ಲೂ ಆನ್‌ಲೈನ್‌ ತರಗತಿ ಪಡೆಯುವಷ್ಟು ವೇಗದ ಇಂಟರ್ನೆಟ್‌ ಸಂಪರ್ಕವೂ ಸಾಧ್ಯವಾಗಿರುವುದು  ಗ್ರಾಮೀಣ ಭಾಗದ ಸಂಪರ್ಕ ವ್ಯವಸ್ಥೆಯೂ ಇಂದು ಸುಧಾರಿಸುತ್ತದೆ ಎನ್ನುವುದು ಕೂಡಾ ಗಮನಾರ್ಹವಾಗಿದೆ. ಗ್ರಾಮೀಣ ಭಾರತವು ಡಿಜಿಟಲ್‌ ಮೂಲಕ ಸಂಪರ್ಕ ಪಡೆದು ಶೈಕ್ಷಣಿಕವಾಗಿ, ಬೌದ್ಧಿಕವಾಗಿಯೂ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

12 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

12 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

13 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

13 hours ago

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

21 hours ago