Advertisement
ರಾಜ್ಯ

ಗ್ರಾಮೀಣ ಭಾಗದ ಕೃಷಿಕನ ಸಾಧನೆ | 55 ನೇ ವರ್ಷದಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದ ಗ್ರಾಮೀಣ ಪ್ರದೇಶದ ಸಾಧಕ |

Share

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದು ಸರ್ವವಿಧಿತ. ವ್ಯಕ್ತಿಯ ಪ್ರತೀ ಕ್ಷಣ, ಪ್ರತೀ ದಿನವೂ ಕಲಿಕೆಯೇ. ಇದಕ್ಕೆ ಸಾಕ್ಷಿಯಾಗಿದ್ದಾರೆ ಗ್ರಾಮೀಣ ಭಾಗದ ಸಾಧಕ. ತನ್ನ 55 ನೇ ವಯಸ್ಸಿನಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದು ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ ಬಳಿಯ ಕಟ್ಟದ ಶಂಕರ ಭಟ್‌ ಕಟ್ಟ ಅವರು ಸಾಧನೆ ಮಾಡಿರುವ ಕೃಷಿಕ.

Advertisement
Advertisement
Advertisement
Advertisement

ಮೈತ್ರೀ ಸಂಸ್ಕೃತಿ ಸಂಸ್ಕೃತ ಪ್ರತಿಷ್ಠಾನ ಗುರುಕುಲ ನಡೆಸಿ ಕೊಡುತ್ತಿರುವ ಅಂತರ್ಜಾಲ ಸಂಸ್ಕೃತ ತರಗತಿಯಲ್ಲಿ, ಡಾ.ಗಣಪತಿ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಸಂಸ್ಕೃತ ತರಗತಿಗಳು ನಡೆಯುತ್ತಿತ್ತು. ಸುಮಾರು 500 ಜನರು ಈ ತರಗತಿಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಎಲ್ಲಾ ವಯಸ್ಸಿನವರೂ ಭಾಗವಹಿಸುತ್ತಿದ್ದರು. ಆನ್‌ಲೈನ್‌ ತರಗತಿಯಲ್ಲಿ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ಕೊಲ್ಲಮೊಗ್ರ ಬಳಿಯ ಕಟ್ಟದ ಕೃಷಿಕ ಶಂಕರ ಭಟ್‌ ಅವರೂ ಭಾಗವಹಿಸಿದ್ದರು. ತಮ್ಮ 55 ನೇ ವಯಸ್ಸಿನಲ್ಲಿ ಆನ್‌ಲೈನ್‌ ಮೂಲಕ ಕುಳಿತು ಅತ್ಯಂತ ಶ್ರದ್ಧೆಯಿಂದ ಸಂಸ್ಕೃತ ಪಾಠದಲ್ಲಿ ಭಾಗವಹಿಸಿ, ಸಂಸ್ಕೃತ ಪ್ರವೇಶ ಪರೀಕ್ಷೆಯಲ್ಲಿ 96/100 ಅಂಕ ಪಡೆದು ಅತಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರ ಈ ಸಾಧನೆ ಎಲ್ಲರ ಗಮನ ಸೆಳೆದಿದೆ.

Advertisement

ಇಲ್ಲಿ ಗ್ರಾಮೀಣ ಭಾಗದ ಅದರಲ್ಲೂ ಕೃಷಿಕ ಕುಟುಂಬದ ಶಂಕರ ಭಟ್‌ ಅವರ ಸಾಧನೆ ಗಮನಾರ್ಹವಾದರೆ, ಆಸಕ್ತಿ ಇದ್ದರೆ ಆನ್‌ ಲೈನ್‌ ಶಿಕ್ಷಣವು ಎಲ್ಲಾ ವಯಸ್ಸಿನವರಿಗೂ ಸಾಧ್ಯವಿದೆ. ಇನ್ನೊಂದು ಅಂಶವೆಂದರೆ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಭಾಗದಲ್ಲಿ ಇಂಟರ್ನೆಟ್‌ ಪಡೆದು, ಅದರಲ್ಲೂ ಆನ್‌ಲೈನ್‌ ತರಗತಿ ಪಡೆಯುವಷ್ಟು ವೇಗದ ಇಂಟರ್ನೆಟ್‌ ಸಂಪರ್ಕವೂ ಸಾಧ್ಯವಾಗಿರುವುದು  ಗ್ರಾಮೀಣ ಭಾಗದ ಸಂಪರ್ಕ ವ್ಯವಸ್ಥೆಯೂ ಇಂದು ಸುಧಾರಿಸುತ್ತದೆ ಎನ್ನುವುದು ಕೂಡಾ ಗಮನಾರ್ಹವಾಗಿದೆ. ಗ್ರಾಮೀಣ ಭಾರತವು ಡಿಜಿಟಲ್‌ ಮೂಲಕ ಸಂಪರ್ಕ ಪಡೆದು ಶೈಕ್ಷಣಿಕವಾಗಿ, ಬೌದ್ಧಿಕವಾಗಿಯೂ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

3 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

3 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

3 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago