Advertisement
ರಾಜ್ಯ

ಗ್ರಾಮೀಣ ಭಾಗದ ಕೃಷಿಕನ ಸಾಧನೆ | 55 ನೇ ವರ್ಷದಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದ ಗ್ರಾಮೀಣ ಪ್ರದೇಶದ ಸಾಧಕ |

Share

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದು ಸರ್ವವಿಧಿತ. ವ್ಯಕ್ತಿಯ ಪ್ರತೀ ಕ್ಷಣ, ಪ್ರತೀ ದಿನವೂ ಕಲಿಕೆಯೇ. ಇದಕ್ಕೆ ಸಾಕ್ಷಿಯಾಗಿದ್ದಾರೆ ಗ್ರಾಮೀಣ ಭಾಗದ ಸಾಧಕ. ತನ್ನ 55 ನೇ ವಯಸ್ಸಿನಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದು ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ ಬಳಿಯ ಕಟ್ಟದ ಶಂಕರ ಭಟ್‌ ಕಟ್ಟ ಅವರು ಸಾಧನೆ ಮಾಡಿರುವ ಕೃಷಿಕ.

ಮೈತ್ರೀ ಸಂಸ್ಕೃತಿ ಸಂಸ್ಕೃತ ಪ್ರತಿಷ್ಠಾನ ಗುರುಕುಲ ನಡೆಸಿ ಕೊಡುತ್ತಿರುವ ಅಂತರ್ಜಾಲ ಸಂಸ್ಕೃತ ತರಗತಿಯಲ್ಲಿ, ಡಾ.ಗಣಪತಿ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಸಂಸ್ಕೃತ ತರಗತಿಗಳು ನಡೆಯುತ್ತಿತ್ತು. ಸುಮಾರು 500 ಜನರು ಈ ತರಗತಿಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಎಲ್ಲಾ ವಯಸ್ಸಿನವರೂ ಭಾಗವಹಿಸುತ್ತಿದ್ದರು. ಆನ್‌ಲೈನ್‌ ತರಗತಿಯಲ್ಲಿ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ಕೊಲ್ಲಮೊಗ್ರ ಬಳಿಯ ಕಟ್ಟದ ಕೃಷಿಕ ಶಂಕರ ಭಟ್‌ ಅವರೂ ಭಾಗವಹಿಸಿದ್ದರು. ತಮ್ಮ 55 ನೇ ವಯಸ್ಸಿನಲ್ಲಿ ಆನ್‌ಲೈನ್‌ ಮೂಲಕ ಕುಳಿತು ಅತ್ಯಂತ ಶ್ರದ್ಧೆಯಿಂದ ಸಂಸ್ಕೃತ ಪಾಠದಲ್ಲಿ ಭಾಗವಹಿಸಿ, ಸಂಸ್ಕೃತ ಪ್ರವೇಶ ಪರೀಕ್ಷೆಯಲ್ಲಿ 96/100 ಅಂಕ ಪಡೆದು ಅತಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರ ಈ ಸಾಧನೆ ಎಲ್ಲರ ಗಮನ ಸೆಳೆದಿದೆ.

ಇಲ್ಲಿ ಗ್ರಾಮೀಣ ಭಾಗದ ಅದರಲ್ಲೂ ಕೃಷಿಕ ಕುಟುಂಬದ ಶಂಕರ ಭಟ್‌ ಅವರ ಸಾಧನೆ ಗಮನಾರ್ಹವಾದರೆ, ಆಸಕ್ತಿ ಇದ್ದರೆ ಆನ್‌ ಲೈನ್‌ ಶಿಕ್ಷಣವು ಎಲ್ಲಾ ವಯಸ್ಸಿನವರಿಗೂ ಸಾಧ್ಯವಿದೆ. ಇನ್ನೊಂದು ಅಂಶವೆಂದರೆ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಭಾಗದಲ್ಲಿ ಇಂಟರ್ನೆಟ್‌ ಪಡೆದು, ಅದರಲ್ಲೂ ಆನ್‌ಲೈನ್‌ ತರಗತಿ ಪಡೆಯುವಷ್ಟು ವೇಗದ ಇಂಟರ್ನೆಟ್‌ ಸಂಪರ್ಕವೂ ಸಾಧ್ಯವಾಗಿರುವುದು  ಗ್ರಾಮೀಣ ಭಾಗದ ಸಂಪರ್ಕ ವ್ಯವಸ್ಥೆಯೂ ಇಂದು ಸುಧಾರಿಸುತ್ತದೆ ಎನ್ನುವುದು ಕೂಡಾ ಗಮನಾರ್ಹವಾಗಿದೆ. ಗ್ರಾಮೀಣ ಭಾರತವು ಡಿಜಿಟಲ್‌ ಮೂಲಕ ಸಂಪರ್ಕ ಪಡೆದು ಶೈಕ್ಷಣಿಕವಾಗಿ, ಬೌದ್ಧಿಕವಾಗಿಯೂ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

9 minutes ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago