Advertisement
ರಾಜ್ಯ

ಗ್ರಾಮೀಣ ಭಾಗದ ಕೃಷಿಕನ ಸಾಧನೆ | 55 ನೇ ವರ್ಷದಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದ ಗ್ರಾಮೀಣ ಪ್ರದೇಶದ ಸಾಧಕ |

Share

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದು ಸರ್ವವಿಧಿತ. ವ್ಯಕ್ತಿಯ ಪ್ರತೀ ಕ್ಷಣ, ಪ್ರತೀ ದಿನವೂ ಕಲಿಕೆಯೇ. ಇದಕ್ಕೆ ಸಾಕ್ಷಿಯಾಗಿದ್ದಾರೆ ಗ್ರಾಮೀಣ ಭಾಗದ ಸಾಧಕ. ತನ್ನ 55 ನೇ ವಯಸ್ಸಿನಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದು ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ ಬಳಿಯ ಕಟ್ಟದ ಶಂಕರ ಭಟ್‌ ಕಟ್ಟ ಅವರು ಸಾಧನೆ ಮಾಡಿರುವ ಕೃಷಿಕ.

ಮೈತ್ರೀ ಸಂಸ್ಕೃತಿ ಸಂಸ್ಕೃತ ಪ್ರತಿಷ್ಠಾನ ಗುರುಕುಲ ನಡೆಸಿ ಕೊಡುತ್ತಿರುವ ಅಂತರ್ಜಾಲ ಸಂಸ್ಕೃತ ತರಗತಿಯಲ್ಲಿ, ಡಾ.ಗಣಪತಿ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಸಂಸ್ಕೃತ ತರಗತಿಗಳು ನಡೆಯುತ್ತಿತ್ತು. ಸುಮಾರು 500 ಜನರು ಈ ತರಗತಿಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಎಲ್ಲಾ ವಯಸ್ಸಿನವರೂ ಭಾಗವಹಿಸುತ್ತಿದ್ದರು. ಆನ್‌ಲೈನ್‌ ತರಗತಿಯಲ್ಲಿ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ಕೊಲ್ಲಮೊಗ್ರ ಬಳಿಯ ಕಟ್ಟದ ಕೃಷಿಕ ಶಂಕರ ಭಟ್‌ ಅವರೂ ಭಾಗವಹಿಸಿದ್ದರು. ತಮ್ಮ 55 ನೇ ವಯಸ್ಸಿನಲ್ಲಿ ಆನ್‌ಲೈನ್‌ ಮೂಲಕ ಕುಳಿತು ಅತ್ಯಂತ ಶ್ರದ್ಧೆಯಿಂದ ಸಂಸ್ಕೃತ ಪಾಠದಲ್ಲಿ ಭಾಗವಹಿಸಿ, ಸಂಸ್ಕೃತ ಪ್ರವೇಶ ಪರೀಕ್ಷೆಯಲ್ಲಿ 96/100 ಅಂಕ ಪಡೆದು ಅತಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರ ಈ ಸಾಧನೆ ಎಲ್ಲರ ಗಮನ ಸೆಳೆದಿದೆ.

ಇಲ್ಲಿ ಗ್ರಾಮೀಣ ಭಾಗದ ಅದರಲ್ಲೂ ಕೃಷಿಕ ಕುಟುಂಬದ ಶಂಕರ ಭಟ್‌ ಅವರ ಸಾಧನೆ ಗಮನಾರ್ಹವಾದರೆ, ಆಸಕ್ತಿ ಇದ್ದರೆ ಆನ್‌ ಲೈನ್‌ ಶಿಕ್ಷಣವು ಎಲ್ಲಾ ವಯಸ್ಸಿನವರಿಗೂ ಸಾಧ್ಯವಿದೆ. ಇನ್ನೊಂದು ಅಂಶವೆಂದರೆ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಭಾಗದಲ್ಲಿ ಇಂಟರ್ನೆಟ್‌ ಪಡೆದು, ಅದರಲ್ಲೂ ಆನ್‌ಲೈನ್‌ ತರಗತಿ ಪಡೆಯುವಷ್ಟು ವೇಗದ ಇಂಟರ್ನೆಟ್‌ ಸಂಪರ್ಕವೂ ಸಾಧ್ಯವಾಗಿರುವುದು  ಗ್ರಾಮೀಣ ಭಾಗದ ಸಂಪರ್ಕ ವ್ಯವಸ್ಥೆಯೂ ಇಂದು ಸುಧಾರಿಸುತ್ತದೆ ಎನ್ನುವುದು ಕೂಡಾ ಗಮನಾರ್ಹವಾಗಿದೆ. ಗ್ರಾಮೀಣ ಭಾರತವು ಡಿಜಿಟಲ್‌ ಮೂಲಕ ಸಂಪರ್ಕ ಪಡೆದು ಶೈಕ್ಷಣಿಕವಾಗಿ, ಬೌದ್ಧಿಕವಾಗಿಯೂ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

4 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago