Advertisement
ರಾಜ್ಯ

ಗ್ರಾಮೀಣ ಭಾಗದ ಕೃಷಿಕನ ಸಾಧನೆ | 55 ನೇ ವರ್ಷದಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದ ಗ್ರಾಮೀಣ ಪ್ರದೇಶದ ಸಾಧಕ |

Share

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದು ಸರ್ವವಿಧಿತ. ವ್ಯಕ್ತಿಯ ಪ್ರತೀ ಕ್ಷಣ, ಪ್ರತೀ ದಿನವೂ ಕಲಿಕೆಯೇ. ಇದಕ್ಕೆ ಸಾಕ್ಷಿಯಾಗಿದ್ದಾರೆ ಗ್ರಾಮೀಣ ಭಾಗದ ಸಾಧಕ. ತನ್ನ 55 ನೇ ವಯಸ್ಸಿನಲ್ಲಿ ಸಂಸ್ಕೃತದಲ್ಲಿ 96 ಅಂಕ ಪಡೆದು ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ ಬಳಿಯ ಕಟ್ಟದ ಶಂಕರ ಭಟ್‌ ಕಟ್ಟ ಅವರು ಸಾಧನೆ ಮಾಡಿರುವ ಕೃಷಿಕ.

ಮೈತ್ರೀ ಸಂಸ್ಕೃತಿ ಸಂಸ್ಕೃತ ಪ್ರತಿಷ್ಠಾನ ಗುರುಕುಲ ನಡೆಸಿ ಕೊಡುತ್ತಿರುವ ಅಂತರ್ಜಾಲ ಸಂಸ್ಕೃತ ತರಗತಿಯಲ್ಲಿ, ಡಾ.ಗಣಪತಿ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಸಂಸ್ಕೃತ ತರಗತಿಗಳು ನಡೆಯುತ್ತಿತ್ತು. ಸುಮಾರು 500 ಜನರು ಈ ತರಗತಿಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಎಲ್ಲಾ ವಯಸ್ಸಿನವರೂ ಭಾಗವಹಿಸುತ್ತಿದ್ದರು. ಆನ್‌ಲೈನ್‌ ತರಗತಿಯಲ್ಲಿ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ಕೊಲ್ಲಮೊಗ್ರ ಬಳಿಯ ಕಟ್ಟದ ಕೃಷಿಕ ಶಂಕರ ಭಟ್‌ ಅವರೂ ಭಾಗವಹಿಸಿದ್ದರು. ತಮ್ಮ 55 ನೇ ವಯಸ್ಸಿನಲ್ಲಿ ಆನ್‌ಲೈನ್‌ ಮೂಲಕ ಕುಳಿತು ಅತ್ಯಂತ ಶ್ರದ್ಧೆಯಿಂದ ಸಂಸ್ಕೃತ ಪಾಠದಲ್ಲಿ ಭಾಗವಹಿಸಿ, ಸಂಸ್ಕೃತ ಪ್ರವೇಶ ಪರೀಕ್ಷೆಯಲ್ಲಿ 96/100 ಅಂಕ ಪಡೆದು ಅತಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರ ಈ ಸಾಧನೆ ಎಲ್ಲರ ಗಮನ ಸೆಳೆದಿದೆ.

ಇಲ್ಲಿ ಗ್ರಾಮೀಣ ಭಾಗದ ಅದರಲ್ಲೂ ಕೃಷಿಕ ಕುಟುಂಬದ ಶಂಕರ ಭಟ್‌ ಅವರ ಸಾಧನೆ ಗಮನಾರ್ಹವಾದರೆ, ಆಸಕ್ತಿ ಇದ್ದರೆ ಆನ್‌ ಲೈನ್‌ ಶಿಕ್ಷಣವು ಎಲ್ಲಾ ವಯಸ್ಸಿನವರಿಗೂ ಸಾಧ್ಯವಿದೆ. ಇನ್ನೊಂದು ಅಂಶವೆಂದರೆ ಸುಳ್ಯ ತಾಲೂಕಿನ ಅತ್ಯಂತ ಗ್ರಾಮೀಣ ಭಾಗದಲ್ಲಿ ಇಂಟರ್ನೆಟ್‌ ಪಡೆದು, ಅದರಲ್ಲೂ ಆನ್‌ಲೈನ್‌ ತರಗತಿ ಪಡೆಯುವಷ್ಟು ವೇಗದ ಇಂಟರ್ನೆಟ್‌ ಸಂಪರ್ಕವೂ ಸಾಧ್ಯವಾಗಿರುವುದು  ಗ್ರಾಮೀಣ ಭಾಗದ ಸಂಪರ್ಕ ವ್ಯವಸ್ಥೆಯೂ ಇಂದು ಸುಧಾರಿಸುತ್ತದೆ ಎನ್ನುವುದು ಕೂಡಾ ಗಮನಾರ್ಹವಾಗಿದೆ. ಗ್ರಾಮೀಣ ಭಾರತವು ಡಿಜಿಟಲ್‌ ಮೂಲಕ ಸಂಪರ್ಕ ಪಡೆದು ಶೈಕ್ಷಣಿಕವಾಗಿ, ಬೌದ್ಧಿಕವಾಗಿಯೂ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

3 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

4 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago