ಅರಣ್ಯ ಪ್ರದೇಶ ಒತ್ತುವರಿ ಕುರಿತು ಹಲವು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಮತ್ತು ಪರಿಸರ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ವೃತ್ತದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ಪ್ರಕರಣಗಳು ಹೆಚ್ಚಾಗಿದ್ದು, 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗಿದೆ. 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಸಸಿ ನೆಡುವ ಯೋಜನೆಗೆ ಸಮಗ್ರ ಯೋಜನೆ ರೂಪಿಸಲು ಮುಖ್ಯಮಂತ್ರಿ ಅವರಲ್ಲಿ 100 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರಾದ ಎನ್ ಎಚ್ ಕೋನರೆಡ್ಡಿ, ಅರಣ್ಯ ಹಾಗೂ ಪರಿಸರ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…