ಅರಣ್ಯ ಪ್ರದೇಶ ಒತ್ತುವರಿ ಕುರಿತು ಹಲವು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಮತ್ತು ಪರಿಸರ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ವೃತ್ತದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ಪ್ರಕರಣಗಳು ಹೆಚ್ಚಾಗಿದ್ದು, 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗಿದೆ. 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಸಸಿ ನೆಡುವ ಯೋಜನೆಗೆ ಸಮಗ್ರ ಯೋಜನೆ ರೂಪಿಸಲು ಮುಖ್ಯಮಂತ್ರಿ ಅವರಲ್ಲಿ 100 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರಾದ ಎನ್ ಎಚ್ ಕೋನರೆಡ್ಡಿ, ಅರಣ್ಯ ಹಾಗೂ ಪರಿಸರ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…