ಅರಣ್ಯ ಪ್ರದೇಶ ಒತ್ತುವರಿ ಕುರಿತು ಹಲವು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಮತ್ತು ಪರಿಸರ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ವೃತ್ತದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ಪ್ರಕರಣಗಳು ಹೆಚ್ಚಾಗಿದ್ದು, 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗಿದೆ. 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಸಸಿ ನೆಡುವ ಯೋಜನೆಗೆ ಸಮಗ್ರ ಯೋಜನೆ ರೂಪಿಸಲು ಮುಖ್ಯಮಂತ್ರಿ ಅವರಲ್ಲಿ 100 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರಾದ ಎನ್ ಎಚ್ ಕೋನರೆಡ್ಡಿ, ಅರಣ್ಯ ಹಾಗೂ ಪರಿಸರ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…