ಅರಣ್ಯ ಪ್ರದೇಶ ಒತ್ತುವರಿ ಕುರಿತು ಹಲವು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಮತ್ತು ಪರಿಸರ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ವೃತ್ತದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ಪ್ರಕರಣಗಳು ಹೆಚ್ಚಾಗಿದ್ದು, 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗಿದೆ. 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಸಸಿ ನೆಡುವ ಯೋಜನೆಗೆ ಸಮಗ್ರ ಯೋಜನೆ ರೂಪಿಸಲು ಮುಖ್ಯಮಂತ್ರಿ ಅವರಲ್ಲಿ 100 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರಾದ ಎನ್ ಎಚ್ ಕೋನರೆಡ್ಡಿ, ಅರಣ್ಯ ಹಾಗೂ ಪರಿಸರ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…