ಕೋಮು ದ್ವೇಷ, ನೈತಿಕ ಪೊಲೀಸ್ ಗಿರಿ, ಜಾತಿ ಜಗಳ ಮುಂತಾದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಿಂದಿನಿಂದಲೂ ಕೆಟ್ಟ ಹೆಸರು ಇದ್ದದ್ದೆ. ಯಾವುದೇ ಕ್ರಮಕ್ಕೂ ಈ ಕಿರಿ ಕಿರಿ ಜಗ್ಗಿದ್ದು ಅಷ್ಟಕಷ್ಟೇ.. ಈಗ ನೂತನವಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಸಚಿವ ದಿನೇಶ್ ಗುಂಡೂರಾವ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದೆ. ಅವರು ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ.
‘ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಖುಷಿಯಾಗಿದೆ. ಯೂತ್ ಕಾಂಗ್ರೆಸ್ ಸಮಯದಿಂದಲೂ ನಾನು ಇಲ್ಲಿಗೆ ಬರುತ್ತಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಆಗಮಿಸಿದ ಅವರು ‘ಜಿಲ್ಲೆ ಜನರ ನಾಡಿಮಿಡಿತ ಸ್ವಲ್ಪವಾದರೂ ನನಗೆ ಗೊತ್ತಿದೆ. ದಕ್ಷಿಣ ಕನ್ನಡ ಈ ರಾಜ್ಯದ ಅತ್ಯಂತ ಪ್ರತಿಷ್ಠಿತ ಜಿಲ್ಲೆ. ಆಗಾಗ ಬಂದು ಜನರ ಜೊತೆ ಸಂಪರ್ಕದಲ್ಲಿ ಇರುತ್ತೇನೆ, ಅಭಿವೃದ್ಧಿ, ಯೋಜನೆಗಳ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ನೀಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು. ಕಾನೂನು ಉಲ್ಲಂಘಿಸಿದವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದರು.
ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಇನ್ನು ಜಿಲ್ಲೆಯಲ್ಲಿ ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಗೃಹ ಸಚಿವರು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಇದು ದ್ವೇಷ ಸಾಧಿಸೋ ವಿಂಗ್ ಆಗಬಾರದು, ಸಾಮರಸ್ಯ ಕಾಪಾಡೋ ದಳ ಆಗಬೇಕು ಎಂದರು. ಇದೇ ವೇಳೆ ಬಿಜೆಪಿ ಅವಧಿಯಲ್ಲಿ ಕೆಲ ಸಂಘ ಸಂಸ್ಥೆಗಳಿಗೆ ಭೂಮಿ ಪರಭಾರೆ ವಿಚಾರ ‘ಭೂಮಿ ಹಂಚಿಕೆ ವೇಳೆ ಕೆಲ ಲೋಪದೋಷಗಳು ಆಗಿರುವ ಮಾಹಿತಿ ಇದೆ. ಕಂದಾಯ ಇಲಾಖೆ ಈ ಲೋಪದೋಷಗಳನ್ನು ಪರಿಶೀಲಿಸಿ ಸರಿಪಡಿಸಬೇಕು ಎಂದು ಮಂಗಳೂರಿನಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…