Advertisement
ಸುದ್ದಿಗಳು

ದಕ್ಷಿಣ ಕನ್ನಡಕ್ಕೆ ಉಸ್ತುವಾರಿ ಸಚಿವರ ಮೊದಲ ಭೇಟಿ | ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ | ಖಡಕ್ ವಾರ್ನಿಂಗ್ ಕೊಟ್ಟ ಉಸ್ತುವಾರಿ ಸಚಿವರು |

Share

ಕೋಮು ದ್ವೇಷ, ನೈತಿಕ ಪೊಲೀಸ್ ಗಿರಿ, ಜಾತಿ ಜಗಳ ಮುಂತಾದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಿಂದಿನಿಂದಲೂ ಕೆಟ್ಟ ಹೆಸರು ಇದ್ದದ್ದೆ. ಯಾವುದೇ ಕ್ರಮಕ್ಕೂ ಈ ಕಿರಿ ಕಿರಿ ಜಗ್ಗಿದ್ದು ಅಷ್ಟಕಷ್ಟೇ.. ಈಗ ನೂತನವಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಸಚಿವ ದಿನೇಶ್ ಗುಂಡೂರಾವ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದೆ. ಅವರು ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ.

Advertisement
Advertisement

‘ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಖುಷಿಯಾಗಿದೆ. ಯೂತ್ ಕಾಂಗ್ರೆಸ್ ಸಮಯದಿಂದಲೂ ನಾನು ಇಲ್ಲಿಗೆ ಬರುತ್ತಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಆಗಮಿಸಿದ ಅವರು ‘ಜಿಲ್ಲೆ ಜನರ ನಾಡಿ‌ಮಿಡಿತ ಸ್ವಲ್ಪವಾದರೂ ನನಗೆ ಗೊತ್ತಿದೆ. ದಕ್ಷಿಣ ಕನ್ನಡ ಈ ರಾಜ್ಯದ ಅತ್ಯಂತ ಪ್ರತಿಷ್ಠಿತ ಜಿಲ್ಲೆ.​ ಆಗಾಗ ಬಂದು ಜನರ ಜೊತೆ ಸಂಪರ್ಕದಲ್ಲಿ ಇರುತ್ತೇನೆ, ಅಭಿವೃದ್ಧಿ, ಯೋಜನೆಗಳ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ನೀಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು. ಕಾನೂನು‌ ಉಲ್ಲಂಘಿಸಿದವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದರು.

Advertisement

ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಇನ್ನು ಜಿಲ್ಲೆಯಲ್ಲಿ ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಗೃಹ ಸಚಿವರು ಆ್ಯಂಟಿ‌ ಕಮ್ಯುನಲ್​ ವಿಂಗ್ ಸ್ಥಾಪಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಇದು ದ್ವೇಷ ಸಾಧಿಸೋ ವಿಂಗ್ ಆಗಬಾರದು, ಸಾಮರಸ್ಯ ಕಾಪಾಡೋ ದಳ ಆಗಬೇಕು ಎಂದರು. ಇದೇ ವೇಳೆ ಬಿಜೆಪಿ ಅವಧಿಯಲ್ಲಿ ಕೆಲ ಸಂಘ ಸಂಸ್ಥೆಗಳಿಗೆ ಭೂಮಿ ಪರಭಾರೆ ವಿಚಾರ ‘ಭೂಮಿ ಹಂಚಿಕೆ ವೇಳೆ ಕೆಲ ಲೋಪದೋಷಗಳು ಆಗಿರುವ ಮಾಹಿತಿ ಇದೆ. ಕಂದಾಯ ಇಲಾಖೆ ಈ ಲೋಪದೋಷಗಳನ್ನು ಪರಿಶೀಲಿಸಿ ಸರಿಪಡಿಸಬೇಕು ಎಂದು ಮಂಗಳೂರಿನಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​​​ ಹೇಳಿದರು.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

27 mins ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

48 mins ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

1 hour ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

3 hours ago