ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

July 17, 2025
10:13 PM

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ದೇಶಾದ್ಯಂತ ನಕಲಿ ರಸಗೊಬ್ಬರಗಳು ಮತ್ತು ಸಹಾಯಧನ ಹೊಂದಿರುವ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಪತ್ರದಲ್ಲಿ ರಸಗೊಬ್ಬರಗಳ ಮಾರಾಟ ಮಾಡುವವರ ಪರವಾನಗಿ ರದ್ದುಪಡಿಸುವುದು ಸೇರಿದಂತೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.  ಎಲ್ಲ ರಾಜ್ಯಗಳು ಈ ಕುರಿತಂತೆ ರಾಜ್ಯವ್ಯಾಪಿ ಅಭಿಯಾನ ಪ್ರಾರಂಭಿಸಬೇಕು. ಸಾಂಪ್ರದಾಯಿಕ ರಸಗೊಬ್ಬರಗಳಿಗೆ ನ್ಯಾನೊ ಅಥವಾ ಜೈವಿಕ ರಸಗೊಬ್ಬರಗಳ ಹೆಸರು ನೀಡುವ ಮೂಲಕ ರೈತರಿಗೆ ತಪ್ಪು ಮಾಹಿತಿ ನೀಡುವುದನ್ನು ತಡೆಗಟ್ಟಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?
January 9, 2026
7:43 AM
by: ಮಹೇಶ್ ಪುಚ್ಚಪ್ಪಾಡಿ
ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror