Advertisement
ಸುದ್ದಿಗಳು

ಸುಳ್ಳು ಸುದ್ದಿಗಳು ಹರಡುವವರ ವಿರುದ್ಧ ಕ್ರಮ | ದಕ್ಷಿಣ ಕನ್ನಡ ಪೊಲೀಸರಿಂದ ಎಚ್ಚರಿಕೆ

Share

ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಸಮಾಜದ ಶಾಂತಿಗೆ ಭಂಗ ತರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಎಚ್ಚರಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಕೋಮು ಸೌಹಾರ್ದತೆಗೆ ಮತ್ತು ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿರುವುದು ಕಂಡುಬಂದಿದೆ. ಇದರಲ್ಲಿ ಕೆಲವು ಕಿಡಿಗೇಡಿಗಳು, ವಿದ್ಯಾವಂತರು, ಸಂಘಟಕರು ಸಹ ಪಾಲುದಾರರಾಗಿರುವುದು ಗಮನಕ್ಕೆ ಬಂದಿದೆ. ಇದು ಜಿಲ್ಲೆಗೆ ಕಪ್ಪು ಚುಕ್ಕೆ ತರುವಂತಹ ವಿಷಯ. ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಅವರು ಹೇಳಿದರು. ಸುಳ್ಳು ಸುದ್ದಿ ಅಥವಾ ಪ್ರಚೋದನಾಕಾರಿ ಸಂದೇಶಗಳನ್ನು ಜನತೆ ನಂಬಬಾರದು. ಅಂತಹ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದಾಗ ಮಾತ್ರ ತಪ್ಪು ಸಂದೇಶ ರವಾನೆಯಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಅಥವಾ ಪೋಸ್ಟ್ ಹರಿಯಬಿಡುವ ಮೊದಲು, ಅದರ ನೈಜತೆಯನ್ನು ಪರಿಶೀಲಿಸಬೇಕು. ಸಮಾಜದಲ್ಲಿ ಶಾಂತಿ ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಡಾ.ಅರುಣ್ ಕೆ. ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 hour ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

2 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

3 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

9 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

15 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago