Advertisement
ಸುದ್ದಿಗಳು

ಸುಳ್ಳು ಸುದ್ದಿಗಳು ಹರಡುವವರ ವಿರುದ್ಧ ಕ್ರಮ | ದಕ್ಷಿಣ ಕನ್ನಡ ಪೊಲೀಸರಿಂದ ಎಚ್ಚರಿಕೆ

Share

ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಸಮಾಜದ ಶಾಂತಿಗೆ ಭಂಗ ತರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಎಚ್ಚರಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಕೋಮು ಸೌಹಾರ್ದತೆಗೆ ಮತ್ತು ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿರುವುದು ಕಂಡುಬಂದಿದೆ. ಇದರಲ್ಲಿ ಕೆಲವು ಕಿಡಿಗೇಡಿಗಳು, ವಿದ್ಯಾವಂತರು, ಸಂಘಟಕರು ಸಹ ಪಾಲುದಾರರಾಗಿರುವುದು ಗಮನಕ್ಕೆ ಬಂದಿದೆ. ಇದು ಜಿಲ್ಲೆಗೆ ಕಪ್ಪು ಚುಕ್ಕೆ ತರುವಂತಹ ವಿಷಯ. ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಅವರು ಹೇಳಿದರು. ಸುಳ್ಳು ಸುದ್ದಿ ಅಥವಾ ಪ್ರಚೋದನಾಕಾರಿ ಸಂದೇಶಗಳನ್ನು ಜನತೆ ನಂಬಬಾರದು. ಅಂತಹ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದಾಗ ಮಾತ್ರ ತಪ್ಪು ಸಂದೇಶ ರವಾನೆಯಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಅಥವಾ ಪೋಸ್ಟ್ ಹರಿಯಬಿಡುವ ಮೊದಲು, ಅದರ ನೈಜತೆಯನ್ನು ಪರಿಶೀಲಿಸಬೇಕು. ಸಮಾಜದಲ್ಲಿ ಶಾಂತಿ ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಡಾ.ಅರುಣ್ ಕೆ. ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

7 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

8 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

8 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

14 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

14 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

17 hours ago