ಅಕ್ರಮವಾಗಿ ಗೋಸಾಗಾಟದ ಪ್ರಕರಣ ಹೆಚ್ಚಳ | ಮರ್ಧಾಳದ ಬಳಿ ಗೋಸಾಗಾಟದ ವಾಹನಕ್ಕೆ ಪಾದಚಾರಿ ಬಲಿ | ಕೊಲ್ಲಮೊಗ್ರದ ವಿಡಿಯೋ ವೈರಲ್ ಪ್ರಕರಣ ಏನಾಯ್ತು….? |‌

March 31, 2024
1:47 PM
ಅಕ್ರಮವಾಗಿ ಗೋಸಾಗಾಣಿಕೆ ನಡೆಯುತ್ತಲಿದೆ. ಈಚೆಗೆ ಇಂತಹ ಪ್ರಕರಣ ಹೆಚ್ಚಾಗಿದೆ. ದ ಕ ಜಿಲ್ಲೆಯ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಇಂತಹ ಅಕ್ರಮಗಳಿಗೆ ಸೂಕ್ತ ಕ್ರಮ ಅಗತ್ಯ ಇದೆ.

ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಪಾದಚಾರಿ ಮರ್ಧಾಳ ನಿವಾಸಿ ವಿಠಲ ರೈ   ಎಂಬವರು ಶನಿವಾರ ಮೃತಪಟ್ಟಿದ್ದರು. ಈ ಪ್ರಕರಣ ಗಂಭೀರ ಹಂತಕ್ಕೆ ತಲುಪಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಭಾನುವಾರ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದು ತನಿಖೆ ನಡೆಸುತ್ತಿದ್ದಾರೆ.

ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಈ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದರು.

Advertisement

ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾವು ಪ್ರದೇಶದಲ್ಲೂ ಗೋಸಾಗಾಟ ಪತ್ತೆಯಾಗಿತ್ತು, ಅದಕ್ಕೂ ಮುನ್ನ ಕಬಕ ಬಳಿಯಲ್ಲೂ ಗೋಸಾಗಾಟ ಪ್ರಕರಣ ಪತ್ತೆಯಾಗಿತ್ತು. ಇನ್ನು ಗ್ರಾಮೀಣ ಭಾಗದಲ್ಲಿ ಕೂಡಾ ಗೋಹತ್ಯೆ ನಡೆಸುವ ವಿಡಿಯೋ ವೈರಲ್‌ ಆಗಿತ್ತು. ಆದರೂ ಯಾವುದೇ ಕ್ರಮವಾಗಿರಲಿಲ್ಲ.  ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಲ್ಲಿ ಗೋವನ್ನು ಹತ್ಯೆ ನಡೆಸಿದ ವಿಡಿಯೋ ಅದಾಗಿದೆ ಎಂದೂ ಹೇಳಲಾಗಿತ್ತು. ಆದರೂ ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯೇ ಆಗಿರಲಿಲ್ಲ. ಆರೋಪಿಗಳ ಬಗ್ಗೆಯೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಕಡಬದ ಮರ್ಧಾಳದ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ. ಇಲಾಖೆಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ.

ಕೊಲ್ಲಮೊಗ್ರದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror