Advertisement
ಸುದ್ದಿಗಳು

ಅಕ್ರಮವಾಗಿ ಗೋಸಾಗಾಟದ ಪ್ರಕರಣ ಹೆಚ್ಚಳ | ಮರ್ಧಾಳದ ಬಳಿ ಗೋಸಾಗಾಟದ ವಾಹನಕ್ಕೆ ಪಾದಚಾರಿ ಬಲಿ | ಕೊಲ್ಲಮೊಗ್ರದ ವಿಡಿಯೋ ವೈರಲ್ ಪ್ರಕರಣ ಏನಾಯ್ತು….? |‌

Share

ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಪಾದಚಾರಿ ಮರ್ಧಾಳ ನಿವಾಸಿ ವಿಠಲ ರೈ   ಎಂಬವರು ಶನಿವಾರ ಮೃತಪಟ್ಟಿದ್ದರು. ಈ ಪ್ರಕರಣ ಗಂಭೀರ ಹಂತಕ್ಕೆ ತಲುಪಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಭಾನುವಾರ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಈ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದರು.

Advertisement

ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾವು ಪ್ರದೇಶದಲ್ಲೂ ಗೋಸಾಗಾಟ ಪತ್ತೆಯಾಗಿತ್ತು, ಅದಕ್ಕೂ ಮುನ್ನ ಕಬಕ ಬಳಿಯಲ್ಲೂ ಗೋಸಾಗಾಟ ಪ್ರಕರಣ ಪತ್ತೆಯಾಗಿತ್ತು. ಇನ್ನು ಗ್ರಾಮೀಣ ಭಾಗದಲ್ಲಿ ಕೂಡಾ ಗೋಹತ್ಯೆ ನಡೆಸುವ ವಿಡಿಯೋ ವೈರಲ್‌ ಆಗಿತ್ತು. ಆದರೂ ಯಾವುದೇ ಕ್ರಮವಾಗಿರಲಿಲ್ಲ.  ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಲ್ಲಿ ಗೋವನ್ನು ಹತ್ಯೆ ನಡೆಸಿದ ವಿಡಿಯೋ ಅದಾಗಿದೆ ಎಂದೂ ಹೇಳಲಾಗಿತ್ತು. ಆದರೂ ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯೇ ಆಗಿರಲಿಲ್ಲ. ಆರೋಪಿಗಳ ಬಗ್ಗೆಯೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಕಡಬದ ಮರ್ಧಾಳದ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ. ಇಲಾಖೆಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ.

ಕೊಲ್ಲಮೊಗ್ರದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

13 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

14 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

22 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

22 hours ago