Advertisement
ಸುದ್ದಿಗಳು

ಅಕ್ರಮವಾಗಿ ಗೋಸಾಗಾಟದ ಪ್ರಕರಣ ಹೆಚ್ಚಳ | ಮರ್ಧಾಳದ ಬಳಿ ಗೋಸಾಗಾಟದ ವಾಹನಕ್ಕೆ ಪಾದಚಾರಿ ಬಲಿ | ಕೊಲ್ಲಮೊಗ್ರದ ವಿಡಿಯೋ ವೈರಲ್ ಪ್ರಕರಣ ಏನಾಯ್ತು….? |‌

Share

ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಪಾದಚಾರಿ ಮರ್ಧಾಳ ನಿವಾಸಿ ವಿಠಲ ರೈ   ಎಂಬವರು ಶನಿವಾರ ಮೃತಪಟ್ಟಿದ್ದರು. ಈ ಪ್ರಕರಣ ಗಂಭೀರ ಹಂತಕ್ಕೆ ತಲುಪಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಭಾನುವಾರ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದು ತನಿಖೆ ನಡೆಸುತ್ತಿದ್ದಾರೆ.

ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಈ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದರು.

ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾವು ಪ್ರದೇಶದಲ್ಲೂ ಗೋಸಾಗಾಟ ಪತ್ತೆಯಾಗಿತ್ತು, ಅದಕ್ಕೂ ಮುನ್ನ ಕಬಕ ಬಳಿಯಲ್ಲೂ ಗೋಸಾಗಾಟ ಪ್ರಕರಣ ಪತ್ತೆಯಾಗಿತ್ತು. ಇನ್ನು ಗ್ರಾಮೀಣ ಭಾಗದಲ್ಲಿ ಕೂಡಾ ಗೋಹತ್ಯೆ ನಡೆಸುವ ವಿಡಿಯೋ ವೈರಲ್‌ ಆಗಿತ್ತು. ಆದರೂ ಯಾವುದೇ ಕ್ರಮವಾಗಿರಲಿಲ್ಲ.  ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಲ್ಲಿ ಗೋವನ್ನು ಹತ್ಯೆ ನಡೆಸಿದ ವಿಡಿಯೋ ಅದಾಗಿದೆ ಎಂದೂ ಹೇಳಲಾಗಿತ್ತು. ಆದರೂ ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯೇ ಆಗಿರಲಿಲ್ಲ. ಆರೋಪಿಗಳ ಬಗ್ಗೆಯೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಕಡಬದ ಮರ್ಧಾಳದ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ. ಇಲಾಖೆಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ.

ಕೊಲ್ಲಮೊಗ್ರದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

3 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

8 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

13 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago