Advertisement
ಸುದ್ದಿಗಳು

ಅಕ್ರಮವಾಗಿ ಗೋಸಾಗಾಟದ ಪ್ರಕರಣ ಹೆಚ್ಚಳ | ಮರ್ಧಾಳದ ಬಳಿ ಗೋಸಾಗಾಟದ ವಾಹನಕ್ಕೆ ಪಾದಚಾರಿ ಬಲಿ | ಕೊಲ್ಲಮೊಗ್ರದ ವಿಡಿಯೋ ವೈರಲ್ ಪ್ರಕರಣ ಏನಾಯ್ತು….? |‌

Share

ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಪಾದಚಾರಿ ಮರ್ಧಾಳ ನಿವಾಸಿ ವಿಠಲ ರೈ   ಎಂಬವರು ಶನಿವಾರ ಮೃತಪಟ್ಟಿದ್ದರು. ಈ ಪ್ರಕರಣ ಗಂಭೀರ ಹಂತಕ್ಕೆ ತಲುಪಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಭಾನುವಾರ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದು ತನಿಖೆ ನಡೆಸುತ್ತಿದ್ದಾರೆ.

ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಈ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದರು.

ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾವು ಪ್ರದೇಶದಲ್ಲೂ ಗೋಸಾಗಾಟ ಪತ್ತೆಯಾಗಿತ್ತು, ಅದಕ್ಕೂ ಮುನ್ನ ಕಬಕ ಬಳಿಯಲ್ಲೂ ಗೋಸಾಗಾಟ ಪ್ರಕರಣ ಪತ್ತೆಯಾಗಿತ್ತು. ಇನ್ನು ಗ್ರಾಮೀಣ ಭಾಗದಲ್ಲಿ ಕೂಡಾ ಗೋಹತ್ಯೆ ನಡೆಸುವ ವಿಡಿಯೋ ವೈರಲ್‌ ಆಗಿತ್ತು. ಆದರೂ ಯಾವುದೇ ಕ್ರಮವಾಗಿರಲಿಲ್ಲ.  ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಲ್ಲಿ ಗೋವನ್ನು ಹತ್ಯೆ ನಡೆಸಿದ ವಿಡಿಯೋ ಅದಾಗಿದೆ ಎಂದೂ ಹೇಳಲಾಗಿತ್ತು. ಆದರೂ ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯೇ ಆಗಿರಲಿಲ್ಲ. ಆರೋಪಿಗಳ ಬಗ್ಗೆಯೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಕಡಬದ ಮರ್ಧಾಳದ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ. ಇಲಾಖೆಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ.

ಕೊಲ್ಲಮೊಗ್ರದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 hour ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

10 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

17 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago