ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಪಾದಚಾರಿ ಮರ್ಧಾಳ ನಿವಾಸಿ ವಿಠಲ ರೈ ಎಂಬವರು ಶನಿವಾರ ಮೃತಪಟ್ಟಿದ್ದರು. ಈ ಪ್ರಕರಣ ಗಂಭೀರ ಹಂತಕ್ಕೆ ತಲುಪಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಭಾನುವಾರ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದು ತನಿಖೆ ನಡೆಸುತ್ತಿದ್ದಾರೆ.
ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಈ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದರು.
ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾವು ಪ್ರದೇಶದಲ್ಲೂ ಗೋಸಾಗಾಟ ಪತ್ತೆಯಾಗಿತ್ತು, ಅದಕ್ಕೂ ಮುನ್ನ ಕಬಕ ಬಳಿಯಲ್ಲೂ ಗೋಸಾಗಾಟ ಪ್ರಕರಣ ಪತ್ತೆಯಾಗಿತ್ತು. ಇನ್ನು ಗ್ರಾಮೀಣ ಭಾಗದಲ್ಲಿ ಕೂಡಾ ಗೋಹತ್ಯೆ ನಡೆಸುವ ವಿಡಿಯೋ ವೈರಲ್ ಆಗಿತ್ತು. ಆದರೂ ಯಾವುದೇ ಕ್ರಮವಾಗಿರಲಿಲ್ಲ. ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಲ್ಲಿ ಗೋವನ್ನು ಹತ್ಯೆ ನಡೆಸಿದ ವಿಡಿಯೋ ಅದಾಗಿದೆ ಎಂದೂ ಹೇಳಲಾಗಿತ್ತು. ಆದರೂ ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯೇ ಆಗಿರಲಿಲ್ಲ. ಆರೋಪಿಗಳ ಬಗ್ಗೆಯೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಕಡಬದ ಮರ್ಧಾಳದ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ. ಇಲಾಖೆಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…