ಧಾರವಾಡ ಜಿಲ್ಲೆಯಲ್ಲಿ 330 ಕ್ಕೂ ಅಧಿಕ ಶಾಲಾ ಕಟ್ಟಡಗಳು ಮಳೆಯಿಂದಾಗಿ ಹಾನಿಗೀಡಾಗಿದ್ದು, ಈ ಪೈಕಿ 100 ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಅಧಿಕಾರಿಗಳೊಂದಿಗೆ ಮಳೆಹಾನಿ ಬಗ್ಗೆ ಚರ್ಚೆ ನಡೆಸಿದ ಅವರು, ಸಿಎಸ್ಆರ್ ಯೋಜನೆಯಡಿ ನೂರು ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪ್ರಸ್ತಾವನೆ ನೀಡಿದ್ದಾಗಿ ನೀಡಿದ್ದಾರೆ. ಇನ್ನುಳಿದ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಕೂಡಲೇ ಅನುದಾನ ಒದಗಿಸಿ ಕಟ್ಟಡ ನಿರ್ಮಾಣ ಮಾಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ. ಫಸಲ್ ಬಿಮಾ ಯೋಜನೆಯಡಿಯಲ್ಲಿ ಸ್ಥಳೀಯ ವಿಪತ್ತು ಸಮೀಕ್ಷೆ ಪೂರ್ಣಗೊಳಿಸಿ ತ್ವರಿತವಾಗಿ ಸಂಬಂಧಪಟ್ಟ ಬೆಳೆವಿಮಾ ಕಂಪನಿಗೆ ವರದಿ ನೀಡಬೇಕು. ಮಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ದೊರಕಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅತಿ ಹೆಚ್ಚು ಮಳೆ ಸುರಿದಿದ್ದು, ನೂರಾರು ಮನೆ, ಹೊಲ ಹಾಗೂ ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…