ಧಾರವಾಡ ಜಿಲ್ಲೆಯಲ್ಲಿ 330 ಕ್ಕೂ ಅಧಿಕ ಶಾಲಾ ಕಟ್ಟಡಗಳು ಮಳೆಯಿಂದಾಗಿ ಹಾನಿಗೀಡಾಗಿದ್ದು, ಈ ಪೈಕಿ 100 ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಅಧಿಕಾರಿಗಳೊಂದಿಗೆ ಮಳೆಹಾನಿ ಬಗ್ಗೆ ಚರ್ಚೆ ನಡೆಸಿದ ಅವರು, ಸಿಎಸ್ಆರ್ ಯೋಜನೆಯಡಿ ನೂರು ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪ್ರಸ್ತಾವನೆ ನೀಡಿದ್ದಾಗಿ ನೀಡಿದ್ದಾರೆ. ಇನ್ನುಳಿದ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಕೂಡಲೇ ಅನುದಾನ ಒದಗಿಸಿ ಕಟ್ಟಡ ನಿರ್ಮಾಣ ಮಾಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ. ಫಸಲ್ ಬಿಮಾ ಯೋಜನೆಯಡಿಯಲ್ಲಿ ಸ್ಥಳೀಯ ವಿಪತ್ತು ಸಮೀಕ್ಷೆ ಪೂರ್ಣಗೊಳಿಸಿ ತ್ವರಿತವಾಗಿ ಸಂಬಂಧಪಟ್ಟ ಬೆಳೆವಿಮಾ ಕಂಪನಿಗೆ ವರದಿ ನೀಡಬೇಕು. ಮಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ದೊರಕಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅತಿ ಹೆಚ್ಚು ಮಳೆ ಸುರಿದಿದ್ದು, ನೂರಾರು ಮನೆ, ಹೊಲ ಹಾಗೂ ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…