ಧಾರವಾಡ ಜಿಲ್ಲೆಯಲ್ಲಿ 330 ಕ್ಕೂ ಅಧಿಕ ಶಾಲಾ ಕಟ್ಟಡಗಳು ಮಳೆಯಿಂದಾಗಿ ಹಾನಿಗೀಡಾಗಿದ್ದು, ಈ ಪೈಕಿ 100 ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಅಧಿಕಾರಿಗಳೊಂದಿಗೆ ಮಳೆಹಾನಿ ಬಗ್ಗೆ ಚರ್ಚೆ ನಡೆಸಿದ ಅವರು, ಸಿಎಸ್ಆರ್ ಯೋಜನೆಯಡಿ ನೂರು ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪ್ರಸ್ತಾವನೆ ನೀಡಿದ್ದಾಗಿ ನೀಡಿದ್ದಾರೆ. ಇನ್ನುಳಿದ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಕೂಡಲೇ ಅನುದಾನ ಒದಗಿಸಿ ಕಟ್ಟಡ ನಿರ್ಮಾಣ ಮಾಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ. ಫಸಲ್ ಬಿಮಾ ಯೋಜನೆಯಡಿಯಲ್ಲಿ ಸ್ಥಳೀಯ ವಿಪತ್ತು ಸಮೀಕ್ಷೆ ಪೂರ್ಣಗೊಳಿಸಿ ತ್ವರಿತವಾಗಿ ಸಂಬಂಧಪಟ್ಟ ಬೆಳೆವಿಮಾ ಕಂಪನಿಗೆ ವರದಿ ನೀಡಬೇಕು. ಮಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ದೊರಕಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅತಿ ಹೆಚ್ಚು ಮಳೆ ಸುರಿದಿದ್ದು, ನೂರಾರು ಮನೆ, ಹೊಲ ಹಾಗೂ ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…