Advertisement
MIRROR FOCUS

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

Share

ರಾಜ್ಯದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.  ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರೆ ವೈದ್ಯಕೀಯ ಸಂಸ್ಥೆಗಳಲ್ಲಿ ಇಂತಹ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.………ಮುಂದೆ ಓದಿ……..

Advertisement
Advertisement

ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂತಹ ಅಮಾನವೀಯ ಕೃತ್ಯಗಳನ್ನು ತಡೆಯಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಸಚಿವರು ಹೇಳಿದರು.

ಡಾ. ಶರಣ್ ಪ್ರಕಾಶ್ ಪಾಟೀಲ್

ಈ ಕುರಿತು ಕಳವಳ ವ್ಯಕ್ತಪಡಿಸಿರುವ  ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಈ ಕುರಿತ ಪ್ರಕರಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು, ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.  ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ಸಚಿವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

9 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

10 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

10 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

10 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

10 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

10 hours ago